ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿಲ್ಲ: ಸಚಿವ ಸುನಿಲ್ ಸ್ಪಷನೆ
ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ?
Team Udayavani, May 19, 2022, 1:42 PM IST
ಬೆಂಗಳೂರು: ನಾರಾಯಣ ಗುರು, ಭಗತ್ ಸಿಂಗ್ ರನ್ನ ಪಠ್ಯದಿಂದ ತೆಗೆದು ಹಾಕಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಡ್ಗೆವಾರ್ ಭಾಷಣವನ್ನ ಪಠ್ಯದಲ್ಲಿ ಸೇರಿಸಿದರೆ ತಪ್ಪೇನಿದೆ ? ಅಷ್ಟಕ್ಕೂ ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ? ಎಂದು ಪ್ರಶ್ನಿಸಿದರು.
ಹೆಡ್ಗೆವಾರ್ ಅವರ ಪ್ರೇರಣೆಯಿಂದಲೇ ಕೋಟ್ಯಂತರ ಜನ ದೇಶಪ್ರೇಮದ ಕೆಲಸ ಮಾಡುತ್ತಿದ್ದಾರೆ. ಅವರ ಪ್ರೇರಣೆಯಿಂದಲೇ ಕೆಲಸ ಮಾಡುತ್ತಿದ್ದೇವೆ. ಅದು ನಮ್ಮ ಬದ್ಧತೆ ಎಂದರು.
ಪಠ್ಯದಿಂದ ನಾರಾಯಣ ಗುರುಗಳನ್ನ ಕೈಬಿಟ್ಟಿಲ್ಲ, ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಬಗ್ಗೆ ನಾನೇ ಸ್ವತಃ ಶಿಕ್ಷಣ ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನ್ನಾಡಿದ್ದೇನೆ ಎಂದರು.
ಇದನ್ನೂ ಓದಿ : ಆರ್ ಎಸ್ಎಸ್ ಬಗ್ಗೆ ಮಾತಾಡದಿದ್ದರೆ ಕಾಂಗ್ರೆಸ್ ಗೆ ನಿದ್ದೆ ಬರಲ್ಲ: ಹಾಲಪ್ಪ ಆಚಾರ್
ಚಕ್ರವರ್ತಿ ಸೂಲಿಬೆಲೆ ಅವರು ತಾಯಿ ಭಾರತಿಗೆ ವಂದಿಸುವೆ ಎಂದು ಲೇಖನ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ? ತಾಯಿ ಭಾರತಿ ಎಂಬ ವಿಚಾರವನ್ನೂ ವಿರೋಧಿಸುವುದು ಯಾಕೆ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ