ನಾರಾಯಣ ಗುರು, ಭಗತ್ ಸಿಂಗ್ ಪಠ್ಯ ತೆಗೆದಿಲ್ಲ: ಸಚಿವ ಸುನಿಲ್ ಸ್ಪಷನೆ
ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ?
Team Udayavani, May 19, 2022, 1:42 PM IST
ಬೆಂಗಳೂರು: ನಾರಾಯಣ ಗುರು, ಭಗತ್ ಸಿಂಗ್ ರನ್ನ ಪಠ್ಯದಿಂದ ತೆಗೆದು ಹಾಕಿಲ್ಲ. ಕೆಲವರು ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಡ್ಗೆವಾರ್ ಭಾಷಣವನ್ನ ಪಠ್ಯದಲ್ಲಿ ಸೇರಿಸಿದರೆ ತಪ್ಪೇನಿದೆ ? ಅಷ್ಟಕ್ಕೂ ಕಾಂಗ್ರೆಸ್ ಗೆ ಹೆಡ್ಗೆವಾರ್ ಕಂಡರೆ ಭಯ ಯಾಕೆ ? ಎಂದು ಪ್ರಶ್ನಿಸಿದರು.
ಹೆಡ್ಗೆವಾರ್ ಅವರ ಪ್ರೇರಣೆಯಿಂದಲೇ ಕೋಟ್ಯಂತರ ಜನ ದೇಶಪ್ರೇಮದ ಕೆಲಸ ಮಾಡುತ್ತಿದ್ದಾರೆ. ಅವರ ಪ್ರೇರಣೆಯಿಂದಲೇ ಕೆಲಸ ಮಾಡುತ್ತಿದ್ದೇವೆ. ಅದು ನಮ್ಮ ಬದ್ಧತೆ ಎಂದರು.
ಪಠ್ಯದಿಂದ ನಾರಾಯಣ ಗುರುಗಳನ್ನ ಕೈಬಿಟ್ಟಿಲ್ಲ, ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಬಗ್ಗೆ ನಾನೇ ಸ್ವತಃ ಶಿಕ್ಷಣ ಸಚಿವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನ್ನಾಡಿದ್ದೇನೆ ಎಂದರು.
ಇದನ್ನೂ ಓದಿ : ಆರ್ ಎಸ್ಎಸ್ ಬಗ್ಗೆ ಮಾತಾಡದಿದ್ದರೆ ಕಾಂಗ್ರೆಸ್ ಗೆ ನಿದ್ದೆ ಬರಲ್ಲ: ಹಾಲಪ್ಪ ಆಚಾರ್
ಚಕ್ರವರ್ತಿ ಸೂಲಿಬೆಲೆ ಅವರು ತಾಯಿ ಭಾರತಿಗೆ ವಂದಿಸುವೆ ಎಂದು ಲೇಖನ ಬರೆದಿದ್ದಾರೆ. ಅದರಲ್ಲಿ ತಪ್ಪೇನಿದೆ? ತಾಯಿ ಭಾರತಿ ಎಂಬ ವಿಚಾರವನ್ನೂ ವಿರೋಧಿಸುವುದು ಯಾಕೆ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ