ಯಡಿಯೂರಪ್ಪ ಸಂಪುಟದಲ್ಲಿ ಬೆಂಗಳೂರು- ಬೆಳಗಾವಿಗೆ ಪ್ರಾತಿನಿಧ್ಯ
Team Udayavani, Feb 7, 2020, 3:05 AM IST
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಎರಡನೇ ಹಂತದ ವಿಸ್ತರಣೆ ನಂತರ ಸಂಪುಟದಲ್ಲಿ ಲಿಂಗಾಯಿತ ಸಮುದಾಯದ ಪ್ರಾತಿನಿಧ್ಯ 9ಕ್ಕೆ ಏರಿದ್ದರೆ, ಒಕ್ಕಲಿಗ ಶಾಸಕರ ಪ್ರಾತಿನಿಧ್ಯ 7ಕ್ಕೆ ಹಿಗ್ಗಿದೆ!
ಮೊದಲ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಲಿಂಗಾಯಿತ ಸಮುದಾಯದ ಎಂಟು ಮಂದಿ ಸಚಿವರಾಗಿದ್ದರು. ಎರಡನೇ ಸುತ್ತಿನ ವಿಸ್ತರಣೆಯಲ್ಲಿ ಲಿಂಗಾಯಿತ ಸಮುದಾಯದ ಬಿ.ಸಿ. ಪಾಟೀಲ್ ಸಂಪುಟ ಸೇರಿದ್ದಾರೆ. ಒಕ್ಕಲಿಗ ಸಮುದಾಯದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಕೆ.ಗೋಪಾಲಯ್ಯ, ಡಾ.ಕೆ. ಸುಧಾಕರ್ ಸಂಪುಟ ಸೇರಿದ್ದು, ಒಕ್ಕಲಿಗರ ಪ್ರಾತಿನಿಧ್ಯ ಏಳಕ್ಕೆ ಏರಿದೆ.
ಉಳಿದಂತೆ ಕುರುಬ ಸಮುದಾಯದ ಬೈರತಿ ಬಸವರಾಜು, ಬ್ರಾಹ್ಮಣ ಸಮುದಾಯ ಶಿವರಾಮ ಹೆಬ್ಟಾರ್, ಪರಿಶಿಷ್ಟ ಪಂಗಡದ ರಮೇಶ್ ಜಾರಕಿಹೊಳಿ, ರಜಪೂತ ಸಮುದಾಯದ ಆನಂದ್ ಸಿಂಗ್, ಮರಾಠ ಸಮುದಾಯದ ಶ್ರೀಮಂತ ಪಾಟೀಲ್ ಸಂಪುಟ ಸೇರಿದ್ದಾರೆ.
ಬೆಂಗಳೂರು- ಬೆಳಗಾವಿಗೆ ಬಂಪರ್: ಎರಡನೇ ಹಂತದ ಸಂಪುಟ ವಿಸ್ತರಣೆ ಬಳಿಕ ಬೆಂಗಳೂರು ಹಾಗೂ ಬೆಳಗಾವಿಗೆ ಬಂಪರ್ ಕೊಡುಗೆ ಸಿಕ್ಕಂತಾಗಿದೆ. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಎಸ್.ಸುರೇಶ್ ಕುಮಾರ್ ಜತೆಗೆ ಹೊಸದಾಗಿ ಮೂವರು ಸಚಿವರಾಗಿದ್ದು, ಒಟ್ಟು ಏಳು ಸಚಿವ ಸ್ಥಾನ ಸಿಕ್ಕಂತಾಗಿದೆ.
ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ ಜತೆಗೆ ಇದೀಗ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್ ಸಂಪುಟ ಸೇರುವ ಮೂಲಕ ಜಿಲ್ಲೆಗೆ 4 ಸಚಿವ ಸ್ಥಾನ ದೊರೆತಂತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಿವರಾಮ ಹೆಬ್ಟಾರ್ ಸಚಿವರಾಗುವ ಮೂಲಕ ಕರಾವಳಿಗೂ ಸ್ವಲ್ಪ ಪ್ರಾತಿನಿಧ್ಯ ದೊರೆತಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ