ಕಚೇರಿ ಹಾಜರಿ ಸಮಯ ವಿಸ್ತರಣೆಗೆ ಮನವಿ
Team Udayavani, Aug 4, 2019, 3:00 AM IST
ಬೆಂಗಳೂರು: ಸರ್ಕಾರಿ ಸಚಿವಾಲಯದ ನೌಕರರು ಕಚೇರಿ ಕೆಲಸಕ್ಕೆ ಹಾಜರಾಗುವ ಸಮಯವನ್ನು ಅರ್ಧಗಂಟೆ ವಿಳಂಬ ಮಾಡುವಂತೆ ಕೋರಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ವೈಟ್ ಟ್ಯಾಪಿಂಗ್, ಮೆಟ್ರೋ ಕಾಮಗಾರಿ, ಬೆಸ್ಕಾಂ ಕಾಮಗಾರಿಗಳು ಸೇರಿ ಅನೇಕ ಕಾಮಗಾರಿಗಳು ನಡೆಯುತ್ತಿವೆ.
ಅಲ್ಲದೇ ಮುಖ್ಯಮಂತ್ರಿ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಂಚಾರ ಇದ್ದಾಗ ಸಾರ್ವಜನಿಕ ವಾಹನಗಳನ್ನು ತಡೆ ಹಿಡಿಯುವುದರಿಂದ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿ ದಿನ ಅನೇಕ ಸಿಬ್ಬಂದಿ 10 ಗಂಟೆ 10 ನಿಮಿಷದೊಳಗೆ ಕಚೇರಿಗೆ ತಲುಪಲು ಆಗದಿರುವುದರಿಂದ ಅವರ ಹಾಜರಿಯನ್ನು ರಜೆ ಎಂದು ಪರಿಗಣಿಸಲಾಗುತ್ತಿದೆ.
ಇದರಿಂದ ನೌಕರರು ಒತ್ತಡಕ್ಕೆ ಒಳಗಾಗಿ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ, ನೌಕರರಿಗೆ ಬೆಳಗ್ಗೆ ಕಚೇರಿಗೆ ಹಾಜರಾಗಲು 10.30ರ ವರೆಗೂ ಅವಕಾಶ ಕಲ್ಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ