ಉಪನ್ಯಾಸಕರ ನೇಮಕ ಅಧಿಸೂಚನೆಗೆ ಆಗ್ರಹ
Team Udayavani, Sep 30, 2019, 3:03 AM IST
ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿ ಸಂಬಂಧ ಸಲ್ಲಿಸಿರುವ ತಾತ್ಕಾಲಿಕ ಪಟ್ಟಿಗೆ ಹೆಚ್ಚುವರಿ ಹುದ್ದೆಯನ್ನು ಸೇರಿಸಬಾರದು ಎಂದು ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತಾತ್ಕಾಲಿಕವಾಗಿ ಬಿಟ್ಟಿರುವ ಪಟ್ಟಿಯನ್ನು ಅಂತಿಮಗೊಳಿಸಿ, ಉಳಿದ ಹುದ್ದೆಗೆ ಹೊಸದಾಗಿ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಬೇಕು.
ಇದರಿಂದ ಹೊಸದಾಗಿ ಸ್ನಾತಕೋತ್ತರ ಪದವಿ, ಬಿ.ಇಡಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅವಕಾಶ ಸಿಗಲಿದೆ. ಯಾವುದೇ ರೀತಿಯ ಒತ್ತಡಕ್ಕೆ ಮಣಿದು ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ನಡೆಸಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕೆಲವು ಅಭ್ಯರ್ಥಿಗಳು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚುವರಿ ಪಟ್ಟಿಯಲ್ಲಿ ಭ್ರಷ್ಟಾಚಾರ ನಡೆಯುವ ಸಾಧ್ಯತೆ ಇದೆ.
ಹೊಸದಾಗಿ ಅಧಿಸೂಚನೆ ಹೊರಡಿಸಿ, ಅರ್ಹತೆಯ ಆಧಾರದಲ್ಲಿ ನೇಮಕಾತಿ ನಡೆಯಬೇಕು. ಹೆಚ್ಚುವರಿ ಹುದ್ದೆಯನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಿದರೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುವುದರ ಜತೆಗೆ ಅನರ್ಹರ ನೇಮಕಾತಿ ನಡೆಯುವ ಸಾಧ್ಯತೆಯೂ ಇದೆ. ಹೆಚ್ಚುವರಿ ಪಟ್ಟಿ ಪ್ರಕಟಿಸಿದರೆ ರಾಜ್ಯವ್ಯಾಪಿ ಹೋರಾಟ ಮಾಡುವುದರ ಜತೆಗೆ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ನೋಂದ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ