Reservation ಗೊಂದಲ: ಸ್ಥಳೀಯಾಡಳಿತ ಸಂಸ್ಥೆಗಳ “ಅಧಿಕಾರ ಭಾಗ್ಯ’ಕ್ಕೆ ಅಡ್ಡಿ

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಡೆಗಳಲ್ಲಿ

Team Udayavani, Jan 30, 2024, 6:00 AM IST

vidhana-soudha

ಬೆಂಗಳೂರು: ಮೀಸಲಾತಿ ಗೊಂದಲ ರಾಜ್ಯದ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಆಡಳಿತಕ್ಕೆ ಅಡ್ಡಿಯಾಗಿದೆ. ಒಂದು ಕಡೆ ಕಳೆದ ಎರಡೂ¾ರು ವರ್ಷಗಳಿಂದ ತಾ.ಪಂ.-ಜಿ.ಪಂ. ಚುನಾವಣೆಗಳೂ ನನೆಗುದಿಗೆ ಬಿದ್ದಿವೆ. ಇತ್ತ ಚುನಾವಣೆ ನಡೆದರೂ ರಾಜ್ಯದ ಅರ್ಧದಷ್ಟು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳಿಗೆ “ಅಧಿಕಾರ ಭಾಗ್ಯ’ ಇಲ್ಲವಾಗಿದೆ.

ರಾಜ್ಯದಲ್ಲಿ ಸದ್ಯ 31 ಜಿ.ಪಂ. ಹಾಗೂ 276 ತಾ.ಪಂ.ಗಳಿದ್ದು, ಅವುಗಳಿಗೆ ಚುನಾವಣೆ ನಡೆಯಬೇಕಾಗಿದೆ. ಅದೇ ರೀತಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಿತ ರಾಜ್ಯದಲ್ಲಿ 301 ನಗರ ಸ್ಥಳೀಯ ಸಂಸ್ಥೆಗಳಿವೆ. ಇವುಗಳಲ್ಲಿ ಸದ್ಯ ನಾಲ್ಕು ಮಹಾನಗರ ಪಾಲಿಕೆಗಳು, 31 ನಗರಸಭೆ, 70 ಪುರಸಭೆ ಹಾಗೂ 64 ಪಟ್ಟಣ ಪಂಚಾಯತ್‌ಗಳು ಸಹಿತ 170ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲ.

ಗ್ರಾ.ಪಂ.ವ್ಯಾಪ್ತಿ ಹೊರತುಪಡಿಸಿ ಜಿ.ಪಂ.-ತಾ.ಪಂ. ವ್ಯಾಪ್ತಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ವ್ಯಾಪ್ತಿಯ ಅರ್ಧಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆದರೂ ಗೆದ್ದವರಿಗೆ ಅಧಿಕಾರ ಭಾಗ್ಯ ಸಿಕ್ಕಿಲ್ಲ. ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದ ಕಡೆಗಳಲ್ಲಿ ಈಗ ಆಡಳಿತಾಧಿಕಾರಿಗಳದ್ದೇ “ದರ್ಬಾರ್‌’ ನಡೆಯುತ್ತಿದೆ.
ಪಂಚಾಯತ್‌ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಚುನಾಯಿತ ಜಪ್ರತಿನಿಧಿಗಳ ಆಡಳಿತದಿಂದ ವಂಚಿತವಾಗಲು ಮೀಸಲಾತಿ ಕಾರಣ. ಮೀಸಲಾತಿ ಗೊಂದಲದಿಂದಾಗಿ ಕಳೆದ ಎರಡೂ¾ರು ವರ್ಷಗಳಿಂದ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ನಡೆದಿಲ್ಲ. 301 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 2017-18ರಲ್ಲಿ ಚುನಾವಣೆ ನಡೆದು 2021ರ ಆರಂಭದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದು ಮೊದಲ 30 ತಿಂಗಳ ಅಧಿಕಾರಾವಧಿ ಮುಗಿದು, 2ನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಆಗದ ಕಾರಣ ರಾಜ್ಯದ 111 ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅಧಿಕಾರದಿಂದ ವಂಚಿತರಾಗಿದ್ದಾರೆ. ಅದೇ ರೀತಿ 2021ರಲ್ಲಿ ಚುನಾವಣೆ ನಡೆದ 50ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಅಧ್ಯಕ್ಷ-ಉಪಾಧ್ಯಕ್ಷರಿಲ್ಲದೆ ಎರಡು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲವಾಗಿದೆ.

ಅಧಿಕಾರಕ್ಕೆ ಮೀಸಲಾತಿಯೇ ಪ್ರಮುಖ ಅಡ್ಡಿ?
ರಾಜಕೀಯವಾಗಿ ಅವಕಾಶ ವಂಚಿತ ಸಮುದಾಯಗಳಿಗೆ ಅಗತ್ಯ ಪ್ರಾತಿನಿಧ್ಯ ಕಲ್ಪಿಸಲು ಮೀಸಲಾತಿ ವ್ಯವಸ್ಥೆಯಿದೆ. ಆದರೆ ಆ ಮೀಸಲಾತಿ ವಿಚಾರದಲ್ಲಿ ಏಳುವ ಗೊಂದಲಗಳು ಇಂದು ಅವಕಾಶ ವಂಚಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಒದಗಿಸಲು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಸಕಾಲಕ್ಕೆ ಚುನಾಯಿತ ಜನಪ್ರತಿನಿಧಿಗಳ ಆಡಳಿತ ಬರಲು ಬಹುದೊಡ್ಡ ಅಡ್ಡಿಯಾಗಿದೆ. ಚುನಾವಣೆ ನಡೆಯುವಾಗ ವಾರ್ಡ್‌ವಾರು ಮೀಸಲಾತಿ ವಿವಾದ ಏಳುತ್ತದೆ. ವರ್ಷಗಟ್ಟಲೆ ಕಾನೂನು ಹೋರಾಟದ ಬಳಿಕ ಅದು ಬಗೆಹರಿದು ಚುನಾವಣೆ ನಡೆದರೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ವಿಚಾರ ಮತ್ತೆ ನ್ಯಾಯಾಲಯದ ಮೆಟ್ಟಿಲೇರುತ್ತದೆ. ಇದು ಬಗೆಹರಿಯವ ತನಕ ಚುನಾವಣೆಯಲ್ಲಿ ಗೆದ್ದಿದ್ದರೂ ಸ್ಥಳೀಯ ಜನಪ್ರತಿನಿಧಿಗಳಿಗೆ ಅಧಿಕಾರ ಭಾಗ್ಯ ಸಿಗುವುದಿಲ್ಲ.

ಏನಿದು ಮೀಸಲಾತಿ ಗೊಂದಲ?
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಕಾರಣಕ್ಕೆ 2020ರಿಂದ ಚುನಾವಣೆ ನಡೆದಿಲ್ಲ. ಜಿ.ಪಂ. ತಾ.ಪಂ.ಗಳಿಗೂ ಇದೇ ಕಾರಣಕ್ಕೆ ಚುನಾವಣೆ ನಡೆದಿಲ್ಲ. 170ಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ನನೆಗುದಿಗೆ ಬಿದ್ದಿದೆ. ಈ ಎಲ್ಲ ಪ್ರಕರಣಗಳು ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ಮೆಟ್ಟಿಲೇರಿವೆ. ಅಂತಿಮವಾಗಿ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ನೀಡುವ ಸಂಬಂಧ ಸುಪ್ರೀಂಕೋರ್ಟ್‌ 2021ರಲ್ಲಿ ನೀಡಿದ ತೀರ್ಪು ಮೀಸಲಾತಿ ವಿವಾದವನ್ನು ಮತ್ತೂಂದು ಹಂತಕ್ಕೆ ತೆಗೆದುಕೊಂಡು ಹೋಗಿತ್ತು. ನ್ಯಾ|ಭಕ್ತವತ್ಸಲ ಆಯೋಗದ ಶಿಫಾರಸಿನಂತೆ ಮೀಸಲಾತಿ ನಿಗದಿ ಆಗಬೇಕಿದೆ. ನ್ಯಾ| ಕ್ತವತ್ಸಲ ವರದಿಯನ್ನು ರಾಜ್ಯ ಸರಕಾರ ಒಪ್ಪಿಕೊಂಡಿದೆ. ಆದರೆ ಸರಕಾರದ ನಿರ್ಧಾರ ಸುಪ್ರೀಂಕೋರ್ಟ್‌ನ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ಇನ್ನೂ ಬರಬೇಕಿದೆ.

ಎಲ್ಲೆಲ್ಲಿ ಜನಪ್ರತಿನಿಧಿಗಳ ಆಡಳಿತ ಇಲ್ಲ?
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆ.
ನಗರಸಭೆ: ಉಡುಪಿ, ಹೊಸಕೋಟೆ, ಶಹಾಬಾದ, ಸಿರಗುಪ್ಪ, ಚಾಮರಾಜನಗರ, ಸಿಂಧನೂರು, ಬಾಗಲಕೋಟೆ, ಕನಕಪುರ, ಕೊಳ್ಳೆಗಾಲ, ಚಿಕ್ಕಬಳ್ಳಾಪುರ, ಯಾದಗಿರಿ, ಸುರಪುರ, ಕಾರವಾರ, ಶಿರಸಿ, ದಾಂಡೇಲಿ, ಚಿಂತಾಮಣಿ, ಗೌರಿಬಿದನೂರು, ಚಿತ್ರದುರ್ಗ, ತಿಪಟೂರು, ಶಹಾಪುರ, ಇಳಕಲ್‌, ಗಂಗಾವತಿ, ಮುಧೋಳ, ಜಮಖಂಡಿ, ಚಳ್ಳಕೆರೆ, ಹಿರಿಯೂರು, ರಬಕವಿ-ಬನಹಟ್ಟಿ, ರಾಯಚೂರು, ಮಂಡ್ಯ, ಬಸವಕಲ್ಯಾಣ.
ಪುರಸಭೆ: ಆನೇಕಲ್‌, ಹಳ್ಳಿಖೇಡ-ಬಿ, ದೆವನಹಳ್ಳಿ, ಚಿಟಗುಪ್ಪ, ರೋಣ, ಮಳವಳ್ಳಿ, ಪಾಂಡವಪುರ, ಮದ್ದೂರು, ಕುಶಾಲನಗರ, ಸಂಡೂರು, ನವಲಗುಂದ, ವಿರಾಜಪೇಟೆ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ, ಕಂಪ್ಲಿ, ಶ್ರೀರಂಗಪಟ್ಟಣ, ನಾಗಮಂಗಲ, ಗಜೇಂದ್ರಗಡ, ಜೇವರ್ಗಿ, ಆಳಂದ, ಸೇಡಂ, ಚಿತ್ತಾಪುರ, ಕುಣಿಗಲ್‌, ದೇವದುರ್ಗ, ಮುದಗಲ್‌, ಬೀರೂರು, ಕುಷ್ಟಗಿ, ಮುದ್ದೇಬಿಹಾಳ, ಇಂಡಿ, ಲಿಂಗಸೂಗೂರು, ಹುನಗುಂದ, ಅಂಕೋಲಾ,ಗುರುಮಿಠಕಲ್‌ ಬಸವನಬಾಗೇವಾಡಿ, ಸಿಂದಗಿ, ಹಳಿಯಾಳ, ಕುಮಟಾ, ಭಟ್ಕಳ, ಗುಂಡ್ಲುಪೇಟೆ, ಬಾಗೇಪಲ್ಲಿ, ತೆರದಾಳ, ಮಹಾಲಿಂಗಾಪುರ, ಗುಳೇದಗುಡ್ಡ, ಹೊಸದುರ್ಗ, ಮಾನ್ವಿ. ಬದಾಮಿ, ತಾಳಿಕೋಟೆ, ಶಿಕಾರಿಪುರ, ಶಿರಾಳಕೊಪ್ಪ.
ಪಟ್ಟಣ ಪಂಚಾಯತ್‌: ಕುಡತಿನಿ, ಮುಳಗುಂದ, ಅಳ್ನಾವರ, ಬೆಳ್ಳೂರು, ನರೇಗಲ್ಲ, ಕುಂದಗೋಳ, ಕಲಘಟಗಿ, ತೆಕ್ಕಲಕೋಟೆ, ಶಿರಹಟ್ಟಿ, ಜಗಳೂರು, ಕೆರೂರು, ಯಲಬುರ್ಗಾ, ಬೀಳಗಿ, ಕೊಪ್ಪ, ಶೃಂಗೇರಿ, ಯಳಂದೂರು, ಮುಂಡಗೋಡ,ಮೂಡಿಗೆರೆ, ಮೊಳಕಾಲ್ಮೂರು, ಯಲ್ಲಾಪುರ, ಹೊನ್ನಾವರ, ಹನೂರು, ನರಸಿಂಹರಾಜ, ಸಿದ್ದಾಪುರ, ಹೊಸನಗರ, ಜೋಗ್‌-ಕಾರ್ಗಲ್‌.

 ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.