ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಮೀಸಲಾತಿ ನೀಡಿರುವುದು ಸಂವಿಧಾನ ವಿರೋಧಿ: ಸಿದ್ದು


Team Udayavani, Oct 18, 2020, 3:20 PM IST

siddaramiha

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ ಮೀಸಲಾತಿ ಕೊಟ್ಟಿರುವುದು ಸಂವಿಧಾನ ವಿರೋಧಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಒಕ್ಕೂಟ ಸಭೆ ಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ ಮೀಸಲಾತಿ ಕೊಟ್ಟಿರುವುದು ಸಂವಿಧಾನ ವಿರೋಧಿ. ಇದು ಸಂವಿಧಾನದ ಆರ್ಟಿಕಲ್ 14,15.16 ಉಲ್ಲಂಘನೆಯಲ್ಲವೆ ? ಇದಕ್ಕೆ ಯಾರು ವಿರೊಧಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗದ ಸಮೀಕ್ಷೆಯನ್ನು ಯಾರೆಲ್ಲಾ ವಿರೋಧಿಸಿದರು ಅಂತ ಎಲ್ಲರಿಗೂ ಗೊತ್ತಿದೆ. ಸಂವಿಧಾನದ 73, 74 ತಿದ್ದುಪಡಿಯಾದ ಮೇಲೆ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ದೊರೆತಿದೆ. ಮಂಡಲ್ ವರದಿ ಆಧಾರದಲ್ಲಿ ಪ್ರತಿ ರಾಜ್ಯದಲ್ಲಿಯೂ ಹಿಂದುಳಿದ ವರ್ಗಗಳ ಆಯೋಗ ಇರಬೇಕು. ಆಯೋಗ ಸಂವಿಧಾನಾತ್ಮಕವಾಗಿ ಕೆಲಸ.ಮಾಡುತ್ತದೆ. ಅದು ಯಾವತ್ತೂ ಖಾಲಿ ಇರಬಾರದು. ಅಧ್ಯಕ್ಷರಿಲ್ಲದೆ ಒಂದು ವರ್ಷ ಕಳೆಯಿತು. ಯಾಕೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಪ್ರವಾಹ ಸಂತೃಸ್ಥರಿಗೆ ಊಟ ನೀಡಲು ಹಣವಿಲ್ಲ,ಇದು ಸರಕಾರದ ವೈಫಲ್ಯ: ಸತೀಶ್ ಜಾರಕಿಹೊಳಿ

ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಯಾವ ಜಾತಿಯ ಜನರು ಎಷ್ಟಿದ್ದಾರೆ ಎಂದು ಹೇಗೆ ಹೇಳುತ್ತೀರಿ ಎಂದು ಪ್ರಶ್ನಿಸಿತ್ತು. ಪ್ರತಿಯೊಬ್ಬರು ತಮ್ಮ ಜಾತಿಯಲ್ಲಿ 50, 60 ಲಕ್ಷ ಇದ್ದಾರೆ ಅಂತ ಹೇಳುತ್ತಾರೆ. ಅದನ್ನು ತಿಳಿಯಲು ಈ ಸಮಿತಿ ರಚನೆ ಮಾಡಿದ್ದೇ ನಾನು. 1931ರಲ್ಲಿ ಜಾತಿ ಸಮೀಕ್ಷೆಯಾಗಿತ್ತು. ಆ ನಂತರ ಜಾತಿ ಸಮೀಕ್ಷೆ ನಡೆಸಲಿಲ್ಲ. ಜಾತಿ ಸಮೀಕ್ಷೆ ಅಪರಾಧ ಅಲ್ಲ. ನಾನು ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ವರದಿ ಸಿದ್ಧವಾಗಿರಲಿಲ್ಲ. ವರದಿ ಸಿದ್ದವಾಗಿದ್ದರೆ ನಾನೇ ಜಾರಿ ಮಾಡುತ್ತಿದ್ದೆ ಎಂದರು.

ಮೈತ್ರಿ ಸರ್ಕಾರದಲ್ಲಿ ಪುಟ್ಟರಂಗ ಶೆಟ್ಟಿ ಹಿಂದುಳಿದ ವರ್ಗದ ಸಚಿವರಾಗಿದ್ದರು, ಅವರಿಗೆ ವರದಿ ಸ್ವೀಕರಿಸದಂತೆ ಕುಮಾರಸ್ವಾಮಿ ಹೆದರಿಸಿದ್ದರು. ಈಶ್ವರಪ್ಪ ಈ ಸತ್ಯ ಅರಿಯಬೇಕು. ಇದು ಕೇವಲ ಹಿಂದುಳಿದವರಿಗೆ ಮಾತ್ರ ಸೀಮಿತವಾಗಿಲ್ಲ ಸಮಾಜದ ಎಲ್ಲ ವರ್ಗದವರ ಸಮೀಕ್ಷೆ ಇದೆ. ಸಮೀಕ್ಷೆ ಬೆಂಗಳೂರಿನಲ್ಲಿ ಶೇ 84 ರಷ್ಟಾಗಿದೆ. ಉಳಿದ ಭಾಗದಲ್ಲಿ ಶೆ 100% ಸಮೀಕ್ಷೆಯಾಗಿದೆ. ಎಲ್ಲರಿಗೂ ಆದಾಯ ಸಮಾನ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಅಸಮಾನತೆ ನಿರಂತರ ಮುಂದುವರೆಯುತ್ತದೆ.

ಇದನ್ನೂ ಓದಿ: ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆಯ ಬಾಗಿಲಿನಲ್ಲಿಟ್ಟ ಪತಿ: ಬೆಚ್ಚಿಬೀಳುವ ಘಟನೆ !

ಈಗ ಬಿಜೆಪಿ ಅಧಿಕಾರದಲ್ಲಿದೆ. ವರದಿ ಸ್ವೀಕರಿಸಿ ಸಂಪುಟದಲ್ಲಿ ಒಪ್ಪಿಗೆ ಪಡೆದು ಜಾರಿಗೊಳಿಸಬೇಕು. ಇಲ್ಲವಾದಲ್ಲಿ  ಹೋರಾಟ ಮಾಡುತ್ತೇವೆ ಅಂದರೆ ರಾಜಕೀಯ ಮಾಡಿದ ಹಾಗೆನಾ? ನೀವು ಜಾರಿ ಮಾಡದಿದ್ಸರೂ ಸುಮ್ಮನಿರಬೇಕಾ?  ಈ ಸಮೀಕ್ಷೆಗೆ ಹಣ ವೆಚ್ಚ ಮಾಡಿರುವುದು ವ್ಯರ್ಥವಾಗಿಲ್ಲ. ನಮ್ಮ ರಾಜ್ಯದಲ್ಲಿ 2.5 ಲಕ್ಷ ಕೋಟಿ ಬಜೆಟ್ ಇದೆ. 4 ಲಕ್ಷ.ಕೋಟಿ ಸಾಲ ಇದೆ. ಈ ವರದಿ ದೇಶದಲ್ಲಿ ಮಹತ್ವದ ದಾಖಲೆಯಾಗಿ.ಉಳಿಯುತ್ತದೆ ಎಂದರು.

ಇದನ್ನೂ ಓದಿ:  ಭಾರತಕ್ಕಿಂತ ಪಾಕಿಸ್ಥಾನವೇ ಉತ್ತಮವಾಗಿ ಕೋವಿಡ್ ನಿಯಂತ್ರಣ ಮಾಡಿದೆ: ಶಶಿ ತರೂರ್

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.