ಮೀಸಲು ಅಧಿಸೂಚನೆ: ಹೈಕೋರ್ಟ್ ನಿರ್ದೇಶನ
Team Udayavani, Mar 18, 2020, 3:02 AM IST
ಬೆಂಗಳೂರು: ರಾಜ್ಯದ 58 ನಗರಸಭೆ, 117 ಪುರಸಭೆ ಹಾಗೂ 93 ಪ.ಪಂ. ಸೇರಿ 268 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2020ರ ಮಾ.11ರಂದು ಹೊರಡಿಸಿದ ಅಧಿಸೂಚನೆ ಸಂಬಂಧ ಸದ್ಯ ಯಾವುದೇ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಇದರಿಂದಾಗಿ ಚುನಾವಣೆ ನಡೆದು 17 ತಿಂಗಳಿಂದ ನನೆಗುದಿಗೆ ಬಿದ್ದಿರುವ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬವಾ ಗಲಿದೆ. ಹೊಸ ಅಧಿಸೂಚನೆಯಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿ ಯನ್ನು ಎಸ್ಟಿ (ಮಹಿಳೆ) ಕೆಟಗರಿಗೆ ನಿಗದಿಪಡಿಸಿರು ವುದನ್ನು ಪ್ರಶ್ನಿಸಿ ಸ್ಥಳೀಯ ನಗರಸಭೆ ಸದಸ್ಯ ಆಲಂ ಬಾಷಾ ಸಲ್ಲಿಸಿರುವ ಅರ್ಜಿಯು ನ್ಯಾ. ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ಸಿಂಧನೂರು ನಗರ ಸಭೆ ಅಧ್ಯಕ್ಷ ಹುದ್ದೆ ಮೀಸಲು ಸೇರಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಹೊರಡಿಸಲಾಗಿರುವ ಅಧಿ ಸೂಚನೆಗೆ ಸಂಬಂಧಿಸಿದಂತೆ ಸದ್ಯ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಯನ್ನು ಏ.1ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ