ಹೊರಟ್ಟಿ ಬಿಜೆಪಿ ಸೇರ್ಪಡೆಗೆ ದಿನಾಂಕ ನಿಗದಿ!
ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ರಾಜೀನಾಮೆ
Team Udayavani, May 12, 2022, 11:38 AM IST
ಬೆಂಗಳೂರು: ಈಗಾಗಲೇ ಜೆಡಿಎಸ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿರುವ ಬಸವರಾಜ್ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮುನ್ನ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಆರ್ ಟಿ ನಗರದ ಸಿಎಂ ನಿವಾಸದಲ್ಲಿ ಬಿಜೆಪಿ ಸೇರ್ಪಡೆಗೆ ದಿನಾಂಕ ನಿಗದಿ ಮಾಡುವ ಕುರಿತು ಚರ್ಚೆ ನಡೆಸಿದ್ದು, ಸಿಎಂ ದಾವೊಸ್ ಗೆ ಹೋಗುವ ಮುನ್ನ ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ:ಜ್ಞಾನವಾಪಿ ಮಸೀದಿ ಪ್ರಕರಣ:: ಇಂದು ನ್ಯಾಯಾಲಯದಿಂದ ಮಹತ್ವದ ಆದೇಶ ನೀಡುವ ಸಾಧ್ಯತೆ?
ಇನ್ನೆರಡು ದಿನದಲ್ಲಿ ಪರಿಷತ್ ಚುನಾವಣೆಗೆ ನೊಟಿಫಿಕೇಶನ್ ಬರುವ ಸಾಧ್ಯತೆ ಇದ್ದು, ಚುನಾವಣೆ ಅಧಿಸೂಚನೆ ಹೊರ ಬಿದ್ದ ಬಳಿಕ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ಹಿನ್ನೆಯಲ್ಲಿ ಹೊರಟ್ಟಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.