ನದಿ ಜೋಡಣೆಯಿಂದ ರಾಜ್ಯಕ್ಕೆ ಅನ್ಯಾಯ: ನಿರಾಣಿ
Team Udayavani, May 31, 2019, 3:00 AM IST
ಮುಧೋಳ: ಕರ್ನಾಟಕದ ಕೃಷ್ಣಾ, ಆಂಧ್ರದ ಗೋದಾವರಿ ನದಿಗಳ ರಾಷ್ಟ್ರೀಯ ನದಿ ಜೋಡಣೆ ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಈ ಯೋಜನೆಯಿಂದ ಕರ್ನಾಟಕಕ್ಕೆ ಭಾರೀ ಅನ್ಯಾಯವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಕಾಳಜಿ ವಹಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕೆಂದು ಉದ್ಯಮಿ ಹಾಗೂ ಕಾಳಿ ನದಿ ಜೋಡಣೆ ವರದಿ ರೂವಾರಿ ಸಂಗಮೇಶ ನಿರಾಣಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೋದಾವರಿ ಪಾತ್ರದಿಂದ ನೀರನ್ನು ಕೃಷ್ಣಾ ಕಣಿವೆಗೆ ತಿರುಗಿಸುವ ಯೋಜನೆಯಲ್ಲಿ ಒಂದು ಹನಿ ನೀರೂ ರಾಜ್ಯಕ್ಕೆ ದೊರೆಯುವುದಿಲ್ಲ.
1980ರಲ್ಲಿ ಮಹಾನದಿ ಹಾಗೂ ಗೋದಾವರಿ ನದಿ ಪಾತ್ರದಿಂದ ಕರ್ನಾಟಕಕ್ಕೆ 283 ಟಿಎಂಸಿ ನೀರು ಹಂಚಿಕೆಯಾಗಿತ್ತು. ಇದನ್ನು 2000ರಲ್ಲಿ ಮರುಪರಿಶೀಲನೆ ಮಾಡಿ ಈ ಪ್ರಮಾಣವನ್ನು 164 ಟಿಎಂಸಿಗೆ ತಗ್ಗಿಸಲಾಯಿತು.
ಇನ್ನೂ ನೋವಿನ ಸಂಗತಿಯೆಂದರೆ, 2010ರಲ್ಲಿ ನಡೆದ ತೃತೀಯ ಪರಿಕರಣೆಯಲ್ಲಿ ಕರ್ನಾಟಕದ ಹಕ್ಕಿನ ಪಾಲನ್ನು ಸಂಪೂರ್ಣವಾಗಿ ರದ್ದು ಮಾಡಲಾಯಿತು. ಈ ಬಗ್ಗೆ ರಾಜ್ಯದ ಜನತೆ, ಸರ್ಕಾರ ಹಾಗೂ ಸಂಸದರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ