ರಸ್ತೆ, ರೈಲು ಸಂಚಾರ ಬಂದ್?
Team Udayavani, Aug 8, 2019, 3:00 AM IST
* ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಿರಿಬಾಗಿಲು ಬಳಿ ಹಳಿ ಮೇಲೆ ಮಂಗಳವಾರ ಬಿದ್ದಿರುವ ಮಣ್ಣು ತೆರವು ಕಾಮಗಾರಿ ಪ್ರಗತಿಯಲ್ಲಿದೆ. ಗುರುವಾರ ಹಗಲು ರೈಲು ಯಾನ ಪುನರಾರಂಭಿಸಲಿವೆ.
* ಕೊಡಗಿನ ಜೋಡುಪಾಲದಲ್ಲಿ ಮರವೊಂದು ರಸ್ತೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿತು. ಹೈಸೊಡೂರು-ಬಿರುನಾಣಿ ರಸ್ತೆ ಸಂಚಾರ ನಿಷೇಧ.
* ಶಹಾಪುರ ತಾಲೂಕಿನ ಕೊಳ್ಳೂರು ಎಂ. ಸೇತುವೆ ಮುಳುಗಡೆಯಾಗಿ ದೇವದುರ್ಗಕ್ಕೆ ಸಂಪರ್ಕ ಸ್ಥಗಿತವಾಗಿದೆ. ವಡಗೇರಾ ತಾಲೂಕಿ ಹಯ್ನಾಳ ಮತ್ತು ಐಕೂರ ಮಧ್ಯದ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಬಂದ್.
* ಚಿಕ್ಕಮಗಳೂರು ಜಿಲ್ಲೆ ಕಳಸ- ಹೊರನಾಡು ಸಂಪರ್ಕ ಬಂದ್.
* ಮಂಗಳವಾರ ತಡರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಸಂಚಾರ ನಿಷೇಧಿಸಲಾಗಿದೆ.
* ಇಟ್ಟಿನಹಳ್ಳಿ ಹಾಗೂ ಕುಳಗೂರು ಗ್ರಾಮಗಳಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿದ್ದ ಕಿರು ಸೇತುವೆ ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಬಸರೀಕಟ್ಟೆ-ಹೇರೂರು ರಸ್ತೆಯಲ್ಲಿ ಮರಬಿದ್ದು ಸಂಚಾರ ಸ್ಥಗಿತವಾಗಿದೆ. ಹೊಳೆಬಾಗಿಲು, ತೆಪ್ಪದಗಂಡಿ ಹಾಗೂ ಮಹಲ್ಗೋಡಿನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದರಿಂದ ಸಂಚಾರ ಬಂದ್ ಆಗಿತ್ತು. ಕಳೆದ ಐದು ದಿನಗಳಿಂದ ಕಲಬುರಗಿ-ರಾಯಚೂರು ಮಾರ್ಗದ ರಸ್ತೆ ಬಂದ್ ಮಾಡಲಾಗಿದೆ.
* ಧಾರವಾಡ ಜಿಲ್ಲೆಯಲ್ಲಿ ಅಳ್ನಾವರದ ಇಂದಿರಮ್ಮನ ಕೆರೆಯಲ್ಲೂ ಕೋಡಿ ಬಿದ್ದ ನೀರಿನ ರಭಸಕ್ಕೆ ಹುಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ. ಜಿಲ್ಲೆಯ 11 ಹಳ್ಳಿಗಳಿಗೆ ಬಸ್ ಸಂಚಾರ ಸ್ಥಗಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು