ಚತುಷ್ಪಥ ರಸ್ತೆ 2022ರೊಳಗೆ ಪೂರ್ಣವಾಗಲಿ: ತಾಕೀತು
Team Udayavani, Jan 13, 2021, 4:00 AM IST
ಹಾಸನ: ಕುಂಟುತ್ತಾ ಸಾಗಿರುವ ರಾಷ್ಟ್ರೀಯ ಹೆದ್ದಾರಿ -75ರ ಹಾಸನ-ಸಕಲೇಶಪುರ ನಡುವಿನ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು 2022ರೊಳಗೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಿಜೆಪಿ ಮುಖಂಡರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಂಸದರಾದ ಪ್ರತಾಪ್ ಸಿಂಹ, ನಾರಾಯಣಸ್ವಾಮಿ, ಮತ್ತು ಶಾಸಕ ಅಶ್ವತ್ಥನಾರಾಯಣ ಮತ್ತಿತರ ಮುಖಂಡರು ಆಲೂರಿನ ಭರತವಳ್ಳಿ ಬಳಿ ಕಾಮಗಾರಿ ವೀಕ್ಷಿಸಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಎನ್ಎಚ್ಎಐ ಎಂಜಿನಿಯರುಗಳೊಂದಿಗೆ ಸ್ಥಳ ಪರಿಶೀಲಿಸಿದ ಅವರು ಈ ವರ್ಷದ ಮೇ ತಿಂಗಳ ಅಂತ್ಯಕ್ಕೆ ಆದಷ್ಟು ಪೂರ್ಣಗೊಳಿಸಿ 2022ಕ್ಕೆ ಸಂಪೂರ್ಣ ಕಾಮಗಾರಿ ಮುಗಿಸಲೇಬೇಕೆಂದು ನಿರ್ದೇಶನ ನೀಡಿದರು.
ಬಿ.ಸಿ. ರೋಡ್-ಅಡ್ಡಹೊಳೆ ಫೆ. 1ರಿಂದ ಕಾಮಗಾರಿ ಆರಂಭ :
ನಳಿನ್ ಕುಮಾರ್ ಕಟೀಲು ಮಾತನಾಡಿ, ಮಂಗಳೂರು ಕಡೆಯಿಂದ ಬಿ.ಸಿ.ರೋಡ್ನಿಂದ ಅಡ್ಡಹೊಳೆ ವರೆಗಿನ ಕಾಮಗಾರಿ ನಿಂತಿದೆ. ಇದಕ್ಕಾಗಿ ಹೊಸದಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು , ಫೆ. 1ರಿಂದ ಕಾಮಗಾರಿ ಆರಂಭವಾಗಲಿದೆ. 2022ರೊಳಗೆ ಹಾಸನ – ಬಿ.ಸಿ.ರೋಡ್ ನಡುವೆ ಚತುಷ್ಪಥ ರಸ್ತೆ ನಿರ್ಮಾಣ ಪೂರ್ಣಗೊಳ್ಳಲಿದೆ. ಪ್ರತಿ ತಿಂಗಳೂ ಕಾಮಗಾರಿಯ ಪ್ರಗತಿ ವರದಿ ಪಡೆಯಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ