ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಜತೆಗೆ ಬರಲಿದೆ ರೋಬೋಟ್‌!

ದೇಶದಲ್ಲೇ ರೋಬೋಟ್‌ ಸೇವೆ ನೀಡುವ ಮೊದಲ ನಿಲ್ದಾಣ ಕೆಐಎಎಲ್‌

Team Udayavani, Jun 8, 2022, 2:21 PM IST

ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಜತೆಗೆ ಬರಲಿದೆ ರೋಬೋಟ್‌!

ಬೆಂಗಳೂರು: ನೀವು ಏರಲಿರುವ ವಿಮಾನ ಎಷ್ಟೊತ್ತಿಗೆ ಹೊರಡಲಿದೆ? ಅಷ್ಟು ದೊಡ್ಡ ಟರ್ಮಿನಲ್‌ನಲ್ಲಿ ನೀವು ಪ್ರಯಾಣ ಬೆಳೆಸಲಿರುವ ವಿಮಾನ ಎಲ್ಲಿ ನಿಂತಿದೆ? ಅಲ್ಲಿಗೆ ಹೋಗುವುದಾದರೂ ಹೇಗೆ? ನಿಲ್ದಾಣದಲ್ಲಿ ತಿಂಡಿ ಎಲ್ಲಿ ಸಿಗುತ್ತದೆ? ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ಕ್ಕೆ ಆಗಮಿಸುವ ಪ್ರಯಾಣಿಕರಿಗೆ ಇಂತಹ ಹಲವಾರು ಮಾಹಿತಿ ಗಳನ್ನು ಇನ್ಮುಂದೆ ರೋಬೋಟ್‌ಗಳೇ ನೀಡಲಿವೆ.

ಅಷ್ಟೇ ಅಲ್ಲ, ಟರ್ಮಿನಲ್‌ನಲ್ಲಿ ನೀವು ತೆರಳಬೇಕಾದ ಜಾಗಕ್ಕೆ ಸ್ವತಃ ಈ ರೋಬೋಟ್‌ಗಳು ನಿಮ್ಮನ್ನು ಕರೆದೊಯ್ದು ಬಿಡುತ್ತವೆ! ಹೌದು, ಪ್ರಯಾಣಿಕರ ಅನುಕೂಲಕ್ಕಾಗಿ ಕೃತಕ ಬುದ್ಧಿಮತ್ತೆ ಆಧಾರಿತ 10 ಹೈಟೆಕ್‌ ರೋಬೋಟ್‌ಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್‌) ಪರಿಚಯಿಸಿದ್ದು, ಇವು ಅಲ್ಲಿನ ಸಿಬ್ಬಂದಿಯಂತೆಯೇ ನಿಲ್ದಾಣದ ತುಂಬಾ ಓಡಾಡಿಕೊಂಡು ಬಂದು- ಹೋಗುವ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲಿವೆ. ದೇಶದ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿರುವುದು ಇದೇ ಮೊದಲು ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಐಎಎಲ್‌, ಆರ್ಟಿಲಿಜೆಂಟ್‌ ಸಲ್ಯುಷನ್ಸ್‌ ಪ್ರೈ.ಲಿ., ಸಹಯೋಗದಲ್ಲಿ ರೋಬೋಟ್‌ಗಳನ್ನು ಅಳವಡಿಸಿದೆ. ಈ ಯಂತ್ರಗಳು ಪ್ರಯಾಣಿಕರಿಗೆ ಕನಿಷ್ಠ ಮಾಹಿತಿಗಳನ್ನು ಒದಗಿಸಲಿವೆ. ಉದಾಹರಣೆಗೆ ವಿಮಾನ ನಿರ್ಗಮನ- ಆಗಮನದ ಸಮಯ, ವಿಮಾನ ನಿಲುಗಡೆ ಸ್ಥಳ ಸೇರಿದಂತೆ ವಿವಿಧೆಡೆ ತೆರಳಲು ದಿಕ್ಕು ತೋರಿಸುವುದು, ಆಹಾರ ಮತ್ತು ಪಾನೀಯ ಮಾಹಿತಿಗಳನ್ನು ಒದಗಿಸಲಿದೆ. ಅಲ್ಲದೆ, ಈ ರೋಬೋಟ್‌ಗಳು ನೀವು ಬಯಸುವ ಸ್ಥಳಕ್ಕೆ ನಿಮ್ಮನ್ನು ಕರೆದೊಯ್ದು ಕೂಡ ಬಿಡಲಿವೆ.

ಸದ್ಯಕ್ಕೆ ಇಂಗ್ಲಿಷ್‌ನಲ್ಲಿ ಮಾರ್ಗದರ್ಶನ ಮಾಡುವ ಈ ಯಂತ್ರಗಳು, ಮುಂಬರುವ ದಿನಗಳಲ್ಲಿ ಕನ್ನಡದಲ್ಲೂ ನೀಡಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಯಾಣಿಕ ದೃಷ್ಟಿಯನ್ನು ಇಟ್ಟುಕೊಂಡು ಪರಿಚಯಿಸಲಾದ ಈ ಸ್ಮಾರ್ಟ್‌ ರೋಬೋಟ್‌ಗಳು ಅಸಾಧಾರಣ ಸೇವೆಗಳನ್ನು ನೀಡಲಿವೆ. ಮುಂಬರುವ ದಿನಗಳಲ್ಲಿ ಪ್ರಯಾಣಿಕರಿಗೆ ಅಡತಡೆ ರಹಿತ ಸೇವೆಗೆ ಇದು ಟ್ರೆಂಡ್‌ಸೆಟರ್‌ ಆಗಲಿದೆ. –ಜಯರಾಜ್‌ ಷಣ್ಮುಗಂ, ಬಿಐಎಎಲ್‌ ಮುಖ್ಯ ಕಾರ್ಯಾಚರಣೆ ಅಧಿಕಾರಿ

ಜಾಗತಿಕ ಮಟ್ಟದಲ್ಲಿ ವಿಮಾನಯಾನ ಕ್ಷೇತ್ರ ದಲ್ಲಿ ಇದೊಂದು ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಲಿದೆ. ದೇಶದಲ್ಲಿ ವಿಮಾನ ನಿಲ್ದಾಣಗಳಲ್ಲಿ ರೋಬೋಟ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡುತ್ತಿರುವ ಮೊದಲ ನಿಲ್ದಾಣ ಬೆಂಗಳೂರು ಏರ್‌ಪೋರ್ಟ್‌ ಆಗಿದೆ. -ರೂಪೇಶ್‌ ಸಾವಂತ್‌, ಆರ್ಟಿಲಿಜೆಂಟ್‌ ಸಲ್ಯುಷನ್ಸ್‌ ಪ್ರೈ.ಲಿ. ಸಿಇಒ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.