ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಕೊಕ್ ?

ಸಂದೀಪ್ ಉನ್ನಿಕಷ್ಣನ್ ಪಾಠ ಕೈ ಬಿಟ್ಟಿದ್ದ ಬರಗೂರು ಸಮಿತಿ! ಸರ್ಕಾರಕ್ಕೆ ಹೊಸ ಅಸ್ತ್ರ

Team Udayavani, Jun 7, 2022, 3:59 PM IST

rohit chakratheertha has removed from PU Text book Revision Committee

ಬೆಂಗಳೂರು: ಪಿಯುಸಿ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಕೈ ಬಿಡುವುದಕ್ಕೆ ಸರಕಾರ ನಿರ್ಧರಿಸಿದೆ. ಈ ಮಧ್ಯೆ ಬರಗೂರು ರಾಮಚಂದ್ರಪ್ಪ ಸಮಿತಿಯು ಮುಂಬಯಿ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣಣ್ ಪಾಠವನ್ನೇ ಕೈ ಬಿಟ್ಟಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಎಂಟನೇ ತರಗತಿಯ ಕನ್ನಡ ದ್ವಿತೀಯ ಭಾಷೆ ಪಠ್ಯದಲ್ಲಿ ಮುಂಬಯಿ ದಾಳಿ ಹಾಗೂ ಮೇಜರ್ ಸಂದೀಪ್ ಉನ್ನಿಕೃಷ್ಣ, ಹೇಮಂತ್ ಕರ್ಕರೆ, ವಿಜಯ ಸಲಸ್ಕರ್, ತುಕಾರಾಂ ಓಂಬಳೆ ಸೇರಿದಂತೆ ಉಗ್ರರಿಂದ ಮುಂಬಯಿ ರಕ್ಷಣೆಗೆ ಹೋರಾಡಿ ಹುತಾತ್ಮರಾದವರ ಪಾಠವನ್ನು ಹಿಂದಿನ ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು.

ಇದನ್ನೂ ಓದಿ:ಮೂರು ಪಕ್ಷಗಳಲ್ಲಿ ಪ್ರಾಮಾಣಿಕರೇ ಅಸ್ಪೃಶ್ಯರು: ಎಎಪಿ ಸೇರಿದ ಮುಖ್ಯಮಂತ್ರಿ ಚಂದ್ರು ಹೇಳಿಕೆ

ವಿದ್ಯಾರ್ಥಿ ಹಾಗೂ ಶಿಕ್ಷಕರ ಮಧ್ಯೆ ಸಂವಾದ ರೂಪದಲ್ಲಿ ನಡೆಯುವ ಈ ಪಾಠದಲ್ಲಿ ಮುಂಬಯಿ ದಾಳಿಕೋರರನ್ನು ಜಿಹಾದಿಗಳು, ಫಿದಾಯಿನ್ ಗಳು. ಅವರು ಪಾಕಿಸ್ತಾನದವರಾಗಿದ್ದು ಅನ್ಯಮತ ದ್ವೇಷಿಗಳು ಎಂದು ಹೇಳಲಾಗಿತ್ತು. ಜತೆಗೆ ರಾಷ್ಟ್ರೀಯ ರಕ್ಷಣಾ ಪಡೆ (ಎನ್ ಎಸ್ ಜಿ) ಶೌರ್ಯ ಸಾಹಸ ಹಾಗೂ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಬಲಿದಾನದ ಬಗ್ಗೆ ವರ್ಣಿಸಲಾಗಿತ್ತು. ಆದರೆ ಬರಗೂರು ಸಮಿತಿ ಮಾತ್ರ ಇದಕ್ಕೆ ಕತ್ತರಿ ಹಾಕಿದೆ. ಬೇರೆಯವರ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಕಾರಣ ನೀಡಿ ಪಾಠ ಕೈ ಬಿಡಲಾಗಿತ್ತು ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. ಇದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಕೊಕ್: ಈ ಮಧ್ಯೆ ರೋಹಿತ್ ಚಕ್ರತೀರ್ಥ ಅವರನ್ನು ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ಕೈ‌ಬಿಡಲು ಸರಕಾರ ನಿರ್ಧರಿಸಿದೆ. ಸಮಾಜ ವಿಜ್ಞಾನ ಪಾಠ ಪರಿಷ್ಕರಣೆಯ ಜವಾಬ್ದಾರಿಯನ್ನು ಸರಕಾರ ಈ‌ ಹಿಂದೆ ನೀಡಿತ್ತು. ಅದನ್ನು ವಾಪಾಸ್ ಪಡೆಯಲು ನಿರ್ಧರಿಸಿದೆ. ಚಕ್ರತೀರ್ಥ ಬದಲು ಬೇರೆಯವರನ್ನು ಸಮಿತಿಗೆ ನೇಮಕ ಮಾಡಲಾಗುತ್ತದೆ.

ಸಾರ್ವಜನಿಕರ ಮುಂದೆ: ಇದೆಲ್ಲದರ ಮಧ್ಯೆ ಮೂರು ಸಮಿತಿಯ (ಮುಡಂಬಡಿತ್ತಾಯ, ಬರಗೂರು, ರೋಹಿತ್) ಪರಿಷ್ಕೃತ ಪಠ್ಯವನ್ನು ಸಾರ್ವಜನಿಕರ ಮುಂದೆ ಇಡಲು ಸರಕಾರ ನಿರ್ಧರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ವಿವಾದ ಸೃಷ್ಟಿಸುತ್ತಿರುವುದರಿಂದ ಸರಕಾರ ಈ ನಿರ್ಧಾರಕ್ಕೆ ಬಂದಿದ್ದು, ಎಲ್ಲವನ್ನೂ ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.