ಖಾತೆ ಸಿಗಲಿಲ್ಲ ರೂಮ್ ಮಾತ್ರ ಸಿಗ್ತು
Team Udayavani, Jun 20, 2019, 3:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ಸಮ್ಮಿಶ್ರ ಸರ್ಕಾರದ ಸಂಪುಟಕ್ಕೆ ಸೇರ್ಪಡೆಯಾದ ಇಬ್ಬರು ಪಕ್ಷೇತರರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಆದರೆ, ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.
ಆರ್.ಶಂಕರ್ಗೆ ವಿಧಾನಸೌಧದ 237 ಹಾಗೂ 238ನೇ ಸಂಖ್ಯೆಯ ಕೊಠಡಿ ನೀಡಲಾಗಿದೆ. ಎಚ್.ನಾಗೇಶ್ಗೆ ವಿಕಾಸಸೌಧದ 133 ಹಾಗೂ 134 ನಂಬರಿನ ಕೊಠಡಿ ನೀಡಲಾಗಿದೆ. ಶಂಕರ್ಗೆ ಪೌರಾಡಳಿತ ಹಾಗೂ ನಾಗೇಶ್ಗೆ ಜವಳಿ ಖಾತೆ ನೀಡಲು ನಿರ್ಧರಿಸಲಾಗಿತ್ತಾದರೂ ನಾಗೇಶ್ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಬಯಸಿದ್ದರು.
ಹೀಗಾಗಿ, ಖಾತೆ ಹಂಚಿಕೆ ತಡವಾಗಿದೆ ಎನ್ನಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಈಗ ಮುಖ್ಯಮಂತ್ರಿ ಬಳಿ ಇದೆ. ಮತ್ತೂಂದು ಮೂಲಗಳ ಪ್ರಕಾರ, ಕೆಲವು ಸಚಿವರ ಖಾತೆಗಳನ್ನು ಅದಲು ಬದಲು ಮಾಡುವ ಸಾಧ್ಯತೆಯಿದೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ, ಇಬ್ಬರು ನೂತನ ಸಚಿವರಿಗೆ ಖಾತೆ ಹಂಚಿಕೆ ತಡವಾಗಿದೆ ಎಂದೂ ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ