ಲಕ್ಷಾಂತರ ರೂ. ಮೌಲ್ಯದ ಬೆಳೆ ನಷ್ಟ, ಆದ್ರೆ ರೈತರಿಗೆ 1 ರೂ. ಪರಿಹಾರ!
Team Udayavani, Jun 9, 2017, 12:33 PM IST
ಧಾರವಾಡ/ಬಾಗಲಕೋಟೆ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶಗೊಂಡ ರೈತರಿಗೆ ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರವಾಗಿ ಕೇವಲ ಒಂದು ರೂಪಾಯಿ ಪರಿಹಾರವನ್ನು ಖಾತೆಗೆ ಜಮಾ ಮಾಡಿರುವುದು ಇದೀಗ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಧಾರವಾಡದ ಹಾರೋ ಬೆಳವಾಡಿ ಗ್ರಾಮದ ಮೂರು ರೈತರಿಗೆ ಧಾರವಾಡದ ಕಂದಾಯ ಇಲಾಖೆಯಿಂದ 1 ರೂಪಾಯಿ ಪರಿಹಾರ ಜಮೆ ಮಾಡಿದೆ. ಗ್ರಾಮದ ಸಂಗನಗೌಡ, ಮಾನಪ್ಪ ಹಾಗೂ ರುದ್ರಪ್ಪ ಎಂಬ ರೈತರ ಬ್ಯಾಂಕ್ ಖಾತೆಗೆ ಒಂದು ರೂಪಾಯಿ ಬೆಳೆ ಹಾನಿ ಪಪರಿಹಾರ ಜಮಾ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
1 ರೂಪಾಯಿ ಬೆಳೆ ಪರಿಹಾರ ಅಲ್ಲ ಎಂದು ಕಂದಾಯ ಅಧಿಕಾರಿಗಳು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಧಾರವಾಡ, ಬಾಗಲಕೋಟೆಯ ಬಹುತೇಕ ರೈತರಿಗೆ 50 ರೂಪಾಯಿ, 30 ರೂಪಾಯಿ, 100 ರೂಪಾಯಿ, 20 ರೂಪಾಯಿ ಪರಿಹಾರ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹಾಗಾದರೆ 20, 30 ರೂಪಾಯಿಯನ್ನು ಹಾಕಿದ್ದು ಖಾತೆ ಖಚಿತಪಡಿಸಿಕೊಳ್ಳುವುದಕ್ಕಾಗಿಯೇ ಎಂದು ರೈತರು ಪ್ರಶ್ನಿಸಿದ್ದಾರೆ.
ಇದು ರೈತರಿಗೆ ಮಾಡಿದ ಅವಮಾನ: ಕೋಡಿಹಳ್ಳಿ
ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ, ರೈತರ ಹೆಸರಿನಲ್ಲಿ ರಾಜಕಾರಣ ನಡೆಸುವ ಜನಪ್ರತಿನಿಧಿಗಳು, ಸರ್ಕಾರಗಳು ರೈತರನ್ನು ಅವಮಾನ ಮಾಡುತ್ತಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಉದಾಹರಣೆ ಬೇಕಿಲ್ಲ. ಲಕ್ಷಾಂತರ ರೂಪಾಯಿ ಬೆಳೆ ನಷ್ಟ ಹೊಂದಿದ ರೈತನ ಖಾತೆಗೆ ಕೇವಲ ಒಂದು ರೂಪಾಯಿ ಜಮಾ ಮಾಡುವುದು ಅವಮಾನ ಮಾಡಿದಂತೆಯೇ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಖಾಸಗಿ ಚಾನೆಲ್ ವೊಂದರ ಜೊತೆ ಮಾತನಾಡುತ್ತಿ ತಿಳಿಸಿದ್ದಾರೆ.
ಖಾತೆ ಖಚಿತಪಡಿಸಿಕೊಳ್ಳಲು 1 ರೂ. ಜಮೆ!
ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇದೆಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಒಂದು ರೂಪಾಯಿಯನ್ನು ಹಾಕಿ ಪರೀಕ್ಷೆ ಮಾಡಿರುವುದಾಗಿ ಧಾರವಾಡ ಉಪ ವಿಭಾಗಾಧಿಕಾರಿ ಮಹೇಶ್ ಕರ್ಜಗಿ ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…