7 ದಿನಕ್ಕೆ 10 ಕೋಟಿ ರೂ.; ಚರ್ಚೆ ಶೂನ್ಯ 


Team Udayavani, Feb 15, 2019, 1:32 AM IST

2014.jpg

ಬೆಂಗಳೂರು: ಏಳು ದಿನಗಳ ರಾಜ್ಯ ವಿಧಾನಮಂಡಲ ಅಧಿವೇಶನ ಈ ಬಾರಿ ಗದ್ದಲ, ಗಲಾಟೆಯಲ್ಲೇ ಅಂತ್ಯಗೊಂಡಿದ್ದು, 10 ಕೋಟಿ ರೂ. ವೆಚ್ಚವಾದರೂ ಪ್ರತಿಫ‌ಲ “ಶೂನ್ಯ’ ಎಂಬಂತಾಗಿದೆ.

ವಿಧಾನ ಮಂಡಲದ ಅಧಿವೇಶನಕ್ಕೆ ಒಂದು ದಿನಕ್ಕೆ 1.5 ಕೋಟಿ ರೂ. ಅಂದಾಜು ವೆಚ್ಚವಾಗುತ್ತದೆ. ಈ ಬಾರಿ ಏಳು ದಿನ ಅಧಿವೇಶನ ಸಮಾವೇಶಗೊಂಡಿದ್ದು, ಅದರಲ್ಲಿ ಅಧಿಕೃತ ಕಾರ್ಯಸೂಚಿಯಲ್ಲಿ ನಿಗದಿ ಪಡಿಸಿದ ವಿಷಯಗಳ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ. ಜತೆಗೆ, ರಾಜ್ಯದಲ್ಲಿ ಆವರಿಸಿರುವ ಬರ ಸೇರಿ ಇತರೆ ಯಾವುದೇ ಸಮಸ್ಯೆಗಳ ಬಗ್ಗೆಯೂ ಚರ್ಚೆಯಾಗಲಿಲ್ಲ.

ಶಾಸಕರು ಒಂದು ದಿನ ಕಲಾಪಕ್ಕೆ ಬಂದು ಸಹಿ ಹಾಕಿದರೆ, (ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೂ) ಅವರಿಗೆ 2,500ರೂ.ಹಾಜರಾತಿ ವಿಶೇಷ ಭತ್ಯೆ ಪಡೆಯುತ್ತಾರೆ. ವಿಧಾನಸಭೆಯ ಸಚಿವಾಲಯದ ಸುಮಾರು 900 ಸಿಬ್ಬಂದಿ ಕಳೆದ ಹತ್ತು ದಿನಗಳಿಂದ ಅಧಿವೇಶನದ ವಿಶೇಷ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಕಾರ್ಯದಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬ ಸಿಬ್ಬಂದಿಗೂ ಪ್ರತಿ ದಿನ 750 ರೂ. ವಿಶೇಷ ಭತ್ಯೆ ನೀಡಲಾಗುತ್ತದೆ. ವಿಧಾನಸಭೆಯ ಅಧಿಕಾರಿಗಳ ಹೊರತಾಗಿ ಸರ್ಕಾರದ ವಿವಿಧ ಇಲಾಖೆಗಳ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಸುಮಾರು 3 ಸಾವಿರ ಸಿಬ್ಬಂದಿ ಅಧಿವೇಶನದ ಕಾರ್ಯಕ್ಕೆ ನಿಯೋಜಿಸಲಾಗುತ್ತದೆ.

ಅವರಿಗೂ ಅಧಿವೇಶನದ ಸಂದರ್ಭದಲ್ಲಿ 300 ರೂ. ವಿಶೇಷ ಭತ್ಯೆ ನೀಡಲಾಗುತ್ತದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿ ನಡೆಸುವ ಅಧಿವೇಶನದಲ್ಲಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಚರ್ಚೆಯಾಗದೇ ಶಾಸಕರ ಖರೀದಿ ವಿಷಯವೇ ಮಹತ್ವ ಪಡೆಯಿತು.

ರಾಜ್ಯದಲ್ಲಿ 156 ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರು,ಮೇವಿನ ಸಮಸ್ಯೆ, ಸರ್ಕಾರ ಗೋ ಶಾಲೆ ತೆರೆಯದಿರುವುದು, ಬರ ಕಾಮಗಾರಿಯಡಿಯಲ್ಲಿ ನರೇಗಾ ಯೋಜನೆಯಲ್ಲಿ ಜನರಿಗೆ ಉದ್ಯೋಗ ನೀಡದಿರುವುದರಿಂದ ಬರ ಪೀಡಿತ ಪ್ರದೇಶಗಳ ಜನರು ಗುಳೆ ಹೋಗುತ್ತಿದ್ದಾರೆ. ಈ ಎಲ್ಲ ವಿಷಯಗಳ ಕುರಿತು ಗಂಭೀರ ಚರ್ಚೆಯಾಗುತ್ತದೆ ಎಂದುಕೊಂಡಿದ್ದ ರಾಜ್ಯದ ಜನತೆಯ ನಿರೀಕ್ಷೆ ಹುಸಿಯಾಗಿದೆ.

ಬಜೆಟ್‌ ಮೇಲೂ ಚರ್ಚೆಯಿಲ್ಲ: ರಾಜ್ಯದ ಜನರ ಮೇಲೆ ರಾಜ್ಯ ಸರ್ಕಾರ ಖರ್ಚು ಮಾಡುವ, ಆದಾಯ ಪಡೆಯುವ ಬಜೆಟ್‌ ಮೇಲೆ ಯಾವುದೇ ಚರ್ಚೆಯೂ ನಡೆಯಲಿಲ್ಲ. ರಾಜ್ಯಪಾಲರ ಭಾಷಣ, ಬಜೆಟ್‌ ಮಂಡನೆ, ಆಪರೇಷನ್‌ ಆಡಿಯೋ ವಿಚಾರದಲ್ಲಿನ ಆರೋಪ-ಪ್ರತ್ಯಾರೋಪಕ್ಕೆ ಸೀಮಿತವಾಯಿತು. ರಾಜ್ಯಪಾಲರ ಭಾಷಣದ ಮೇಲೂ ಚರ್ಚೆಯಾಗಲಿಲ್ಲ, 2,43 ಲಕ್ಷ ಕೋಟಿ ಮೊತ್ತದ ಬಜೆಟ್‌ ಮೇಲೂ ಚರ್ಚೆಯಾಗಲಿಲ್ಲ.

ಸಾರ್ವಜನಿಕರ ಕೋಟ್ಯಂತರ ರೂ. ಖರ್ಚು ಮಾಡಿ ಅಧಿವೇಶನ ನಡೆಸುತ್ತೇವೆ. ನಾವ್ಯಾರೂ ಇದನ್ನು ನಮ್ಮ ಜೇಬಿನಿಂದ ಹಾಕುವುದಿಲ್ಲ. ಸಭಾಧ್ಯಕ್ಷರೊಬ್ಬರೇ ಕಲಾಪ ನಡೆಸಲು ಮನಸು ಮಾಡಿದರೆ, ಸಾಧ್ಯವಾಗುವುದಿಲ್ಲ. ಜನರಿಂದ ಆಯ್ಕೆಯಾದ ಶಾಸಕರಿಗೂ ಚರ್ಚೆ ಮಾಡಬೇಕು ಎಂಬ ಬುದಿಟಛಿ ಬರಬೇಕು.
● ರಮೇಶ್‌ ಕುಮಾರ್‌, ವಿಧಾಸಭಾಧ್ಯಕ್ಷ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.