ನಾರಾಯಣಗೌಡರಿಗೆ 10 ಕೋಟಿ ಸಂದಾಯ: ಚಂದ್ರಶೇಖರ್
Team Udayavani, May 15, 2019, 3:00 AM IST
ಕೆ.ಆರ್.ಪೇಟೆ: “ಆಪರೇಷನ್ ಕಮಲ’ಕ್ಕೆ ಒಳಗಾಗಿರುವ ಶಾಸಕ ಕೆ.ಸಿ.ನಾರಾಯಣಗೌಡರು ಬಿಜೆಪಿಯವರಿಂದ ಈಗಾಗಲೇ ಹತ್ತು ಕೋಟಿ ರೂ.ಪಡೆದುಕೊಂಡಿದ್ದು, ಬಾಕಿ ಹಣಕ್ಕಾಗಿ ಕಾಯುತ್ತಿದ್ದಾರೆ. ಬಾಕಿ ಹಣ ಸಿಕ್ಕ ತಕ್ಷಣವೇ ಮುಂಬೈಗೆ ಹಾರಿ ಹೋಗಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ನಾರಾಯಣಗೌಡರನ್ನು ಜೆಡಿಎಸ್ ಪಕ್ಷದ ವರಿಷ್ಠರು ಈಗಾಗಲೇ ಕೈಬಿಟ್ಟಿದ್ದಾರೆ. ಈಗ ನಡೆಯುತ್ತಿರುವ ಪುರಸಭಾ ಚುನಾವಣೆ ಉಸ್ತುವಾರಿಯನ್ನು ಶಾಸಕರಿಗೆ ನೀಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದ ಕಾರಣ ಲೋಕಸಭಾ ಚುನಾವಣೆ ಫಲಿತಾಂಶ ಬಂದ ತಕ್ಷಣ ನಾರಾಯಣಗೌಡ ಮಾಯವಾದರೆ ಅಚ್ಚರಿಯಿಲ್ಲ. ಅವರು ಬಿಜೆಪಿಯವರಿಂದ ಈಗಾಗಲೇ ಮುಂಗಡವಾಗಿ 10 ಕೋಟಿ ರೂ.ಪಡೆದುಕೊಂಡಿದ್ದಾರೆ. ಅದರಿಂದಲೇ ಅಧಿವೇಶನದ ಸಮಯದಲ್ಲಿ 15 ದಿನ ಮುಂಬೈನಲ್ಲೇ ಉಳಿದುಕೊಂಡಿದ್ದರು.
ಬಿಜೆಪಿಯವರು ಕೊಟ್ಟ ಮಾತಿನಂತೆ ಬಾಕಿ ಹಣ ಕೈ ಸೇರಿದ ತಕ್ಷಣವೇ ಅವರು ಕ್ಷೇತ್ರ ಬಿಡಲಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿಯವರು ಅವರನ್ನು ಎಲ್ಲಿಗೆ ಎತ್ತಿಕೊಂಡು ಹೋಗುವರೋ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು