13 ಸಾವಿರ ಕೋಟಿ ರೂ. ಸಾಲ ನೀಡಲು ಸಿದ್ಧತೆ

ಹತ್ತು ಲಕ್ಷ ರೈತರಿಗೆ ಹೊಸದಾಗಿ ಸಾಲ, ನಬಾರ್ಡ್‌ನಿಂದ ಶೇ. 70 ನೆರವು ಪಡೆಯಲು ಸರ್ಕಾರ ಪ್ರಯತ್ನ

Team Udayavani, Jun 14, 2019, 5:00 AM IST

farmers

ಬೆಂಗಳೂರು: ಸಹಕಾರ ಸಂಘಗಳಲ್ಲಿನ ಸಾಲಮನ್ನಾ ಜುಲೈ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಈ ವರ್ಷ ರೈತರಿಗೆ ಹದಿಮೂರು ಸಾವಿರ ಕೋಟಿ ರೂ. ಸಾಲ ನೀಡಲು ಸಿದ್ಧತೆ ನಡೆಸಲಾಗಿದೆ.

ಜತೆಗೆ, ಸಹಕಾರ ಸಂಘಗಳಲ್ಲಿ ಕನಿಷ್ಠ ಹತ್ತು ಲಕ್ಷ ಹೊಸದಾಗಿ ರೈತರ ಸೇರ್ಪಡೆಗೊಳಿಸಿ ಶೂನ್ಯ ಬಡ್ಡಿ ದರದಲ್ಲಿ ಅವರಿಗೂ ಸಾಲ ನೀಡಲು ಸಹಕಾರ ಇಲಾಖೆ ಸಜ್ಜಾಗುತ್ತಿದೆ. ಪ್ರಸ್ತುತ ರಾಜ್ಯದ ಸಹಕಾರ ಸಂಘಗಳಲ್ಲಿ 22 ಲಕ್ಷ ರೈತರು ಸದಸ್ಯರಾಗಿದ್ದರೂ 19 ಲಕ್ಷ ರೈತರು 9448 ಕೋಟಿ ರೂ. ಸಾಲ ಪಡೆದಿದ್ದಾರೆ. ಇಷ್ಟೂ ರೈತರಿಗೆ ಮತ್ತೆ ಸಾಲ ಒದಗಿಸುವ ಜತೆಗೆ ಇನ್ನೂ ಹತ್ತು ಲಕ್ಷ ಹೊಸ ರೈತರನ್ನು ಸದಸ್ಯರನ್ನಾಗಿಸಿ ಸಾಲ ನೀಡಿದರೆ 13 ಸಾವಿರ ಕೋಟಿ ರೂ.ವರೆಗೆ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಹಣಕಾಸು ಹೊಂದಾಣಿಕೆ ಸಂಬಂಧ ಜಿಲ್ಲಾ ಸಹಕಾರ ಬ್ಯಾಂಕ್‌, ಅಪೆಕ್ಸ್‌ ಬ್ಯಾಂಕ್‌ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಾಲಮನ್ನಾ ಬಾಬ್ತಿನ ಹಣವೂ ಜುಲೈ ಅಂತ್ಯದೊಳಿಗೆ ಎಲ್ಲ ಜಿಲ್ಲಾ ಸಹಕಾರ ಬ್ಯಾಂಕುಗಳಿಗೆ ಸಂದಾಯವಾಗುವುದರಿಂದ ರೈತರಿಗೆ ಹೊಸದಾಗಿ ಸಾಲ ನೀಡಲು ಅನುಕೂಲವಾಗಲಿದೆ ಎಂದು ಸಹಕಾರ ಇಲಾಖೆ ಮೂಲಗಳು ತಿಳಿಸಿವೆ.ರೈತರಿಗೆ ಸಾಲ ನೀಡಲು ನಬಾರ್ಡ್‌ನಿಂದ ಮೊದಲು ಶೇ.70 ರಷ್ಟು ರೀ ಫೈನಾನ್ಸಿಂಗ್‌ ನೆರವು ದೊರೆಯುತ್ತಿತ್ತಾದರೂ ಇದೀಗ ಆ ಪ್ರಮಾಣ ಶೇ.40 ಕ್ಕೆ ಇಳಿಸಲಾಗಿದೆ. ಇದದರಿಂದ ಡಿಸಿಸಿ ಬ್ಯಾಂಕ್‌ಗಳು ಹೊಸದಾಗಿ ಸಾಲ ನೀಡಲು ಕಷ್ಟವಾಗುತ್ತದೆ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿವೆ. ನಬಾರ್ಡ್‌ನಿಂದ ಮತ್ತೆ ಶೇ.70ರೀ ಫೈನಾನ್ಸಿಂಗ್‌ ನೆರವು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ. ಮುಂಗಾರು ಪ್ರಾರಂಭವಾದ ನಂತರ ಹೊಸ ಸಾಲದ ಜತೆಗೆ ಬಿತ್ತನೆ ಬೀಜ, ಗೊಬ್ಬರಕ್ಕೆ ಸಮಸ್ಯೆ ಇಲ್ಲದಂತೆ ನೋಡಿಕೊಂಡು ಬೆಳೆ ಬಂದ ನಂತರ ಅದನ್ನು ಉತ್ತಮ ಬೆಲೆ ಬರುವವರೆಗೆ ಸಂರಕ್ಷಿಸಿಡಲು ಗೋದಾಮು ಹಾಗೂ ಸಾಗಾಟಕ್ಕೆ ವ್ಯವಸ್ಥೆ ಮಾಡಿಕೊಡಲು ಸಹಕಾರ, ಕೃಷಿ-ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಜತೆಗೂಡಿ ಕಾರ್ಯನಿರ್ವಹಿಸಲು ಸಹ ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗಿದೆ.

ಈ ಮಧ್ಯೆ, ಕಳೆದ ವರ್ಷ ಸಹಕಾರ ಸಂಘಗಳಲ್ಲಿ ಪಡೆದಿದ್ದ 9448 ಕೋಟಿ ರೂ. ಸಾಲದ ಪೈಕಿ ಮೇ ಅಂತ್ಯಕ್ಕೆ 11.2 ಲಕ್ಷ ರೈತರ 4830 ಕೋಟಿ ರೂ.ಮನ್ನಾ ಆಗಿದ್ದು ಇನ್ನೂ 5 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಜೂನ್‌ ತಿಂಗಳ ಕ್ಲೈಮ್ಸ್‌ ಬಂದ ಮೇಲೆ ಸಂಪೂರ್ಣ ಸಾಲದ ಮೊತ್ತ ಮನ್ನಾ ಆಗಲಿದೆ. ಮೊದಲಿಗೆ ಅಂದಾಜು ಮಾಡಿದ ಮೊತ್ತಕ್ಕಿಂತ ಕಡಿಮೆಯೇ ಆಗಲಿದೆ. ವಾಣಿಜ್ಯ ಬ್ಯಾಂಕುಗಳು ಮೊದಲು ರೈತರು ಪಡೆದಿದ್ದ ಸಾಲಗಳ ಬಾಬ್ತಿನಲ್ಲಿ ಎನ್‌ಪಿಎ ಎಂದು ಪರಿಗಣಿಸಿದ್ದ ಖಾತೆಗಳಿಗೆ ಸಂಬಂಧಿಸಿದಂತೆ ಒಂದೇ ಬಾರಿ ತೀರುವಳಿ ಮಾಡಿದರೆ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ, ಆ ನಂತರ ನಿರಾಕರಿಸಿವೆ. ಇದೀಗ ರಾಜ್ಯಸರ್ಕಾರ ಶೇ.25ರಷ್ಟಾದರೂ ಮರುಪಾವತಿಸಿ ಎಂದು ವಾಣಿಜ್ಯ ಬ್ಯಾಂಕುಗಳ ಮುಂದೆ ಪ್ರಸ್ತಾವನೆ ಇಡಲು ಮುಂದಾಗಿದೆ.

ಆತಂಕ ನಿವಾರಣೆ: ಸಾಲಮನ್ನಾ ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಬಹುದೆಂದು ಅಂದಾಜಿಸಲಾಗಿತ್ತಾದರೂ ಬಿಗಿ ನಿಯಮಾವಳಿ ಹಿನ್ನೆಲೆಯಲ್ಲಿ ಸುಮಾರು 20 ಸಾವಿರ ಕೋಟಿ ರೂ.ವರೆಗೆ ಹೊರೆ ತಪ್ಪಿದೆ ಎಂದು ಹೇಳಲಾಗಿದೆ.

ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲದ ಪ್ರಮಾಣವೇ 20 ರಿಂದ 25 ಸಾವಿರ ಕೋಟಿ ರೂ.ವರೆಗೆ ತಲುಪಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಅದು 10,500 ಸಾವಿರ ಕೋಟಿ ರೂ.ವರೆಗೆ ಆಗಲಿದೆ. ಅದೇ ರೀತಿ ಸಹಕಾರ ಸಂಘಗಳಲ್ಲಿನ ಸಾಲಮನ್ನಾ ಮೊತ್ತವೂ ಅಂದಾಜು ಮಾಡಿದ ಮೊತ್ತಕ್ಕಿಂತ ಕಡಿಮೆಯೇ ಆಗಲಿದೆ. ಹೀಗಾಗಿ, ಆರ್ಥಿಕ ಇಲಾಖೆ ಸಾಲಮನ್ನಾ ವಿಚಾರದಲ್ಲಿ ನಿರಾಳವಾಗಿದೆ ಎಂದು ಹೇಳಲಾಗಿದೆ.

ಈ ವರ್ಷ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಗೆ ಹೊಸ ಸಾಲ ಕೊಡುವ ಜತೆಗೆ ಇನ್ನೂ ಹತ್ತು ಲಕ್ಷ ರೈತರನ್ನು ಹೊಸದಾಗಿ ಸೇರ್ಪಡೆ ಮಾಡಲಾಗುವುದು. ಸುಮಾರು 13 ಸಾವಿರ ಕೋಟಿ ರೂ.ನಮಗೆ ಹೊಸ ಸಾಲ ನೀಡಲು ಬೇಕಾಗುತ್ತದೆ. ಈ ಸಂಬಂಧ ಚರ್ಚಿಸಲು ಇದೇ ತಿಂಗಳ 24 ರಂದು ಎಲ್ಲ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರ ಸಭೆ ಕರೆದಿದ್ದೇನೆ. ಒಟ್ಟು 30 ಲಕ್ಷ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ.
– ಬಂಡೆಪ್ಪ ಕಾಶೆಂಪೂರ್‌, ಸಹಕಾರ ಸಚಿವ

-ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.