ಹಲವೆಡೆ ಐಟಿ ದಾಳಿ;ಮೊಳಕಾಲ್ಮೂರಿನಲ್ಲಿ 2.17 ಕೋಟಿ ರೂ ಜಪ್ತಿ!
Team Udayavani, May 11, 2018, 9:26 AM IST
ಬೆಂಗಳೂರು: ಚುನಾವಣೆಗೆ ಮುನ್ನಾದಿನವೂ ಐಟಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ರಾಜ್ಯದ ವಿವಿಧೆಡೆ ಅಭ್ಯರ್ಥಿಗಳು ಮತ್ತು ಆಪ್ತರಿಗೆ ಶಾಕ್ ನೀಡಿದ್ದಾರೆ.
ಮೊಳಕಾಲ್ಮೂರಿನ ಹೆತ್ತಲ ಬೊಮ್ಮನಹಟ್ಟಿ ಗ್ರಾಮದ ಬಳಿ ಬೆಳಗಿನ ಜಾವ 4 ಗಂಟೆ ವೇಳೆ ಐಟಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ 2.17 ಕೋಟಿ ರೂಪಾಯಿ ಹಣ ಜಪ್ತಿ ಮಾಡಿ, ಕಾರಿನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಆಂಧ್ರ ಪ್ರದೇಶದಿಂದ ಬಂದಿದ್ದ ಕಾರು ಬಳ್ಳಾರಿ ಮೂಲದ್ದು ಎಂದು ವರದಿಯಾಗಿದೆ.
ದೇವನಹಳ್ಳಿಯಲ್ಲಿ 17 ಲಕ್ಷ ರೂ ಜಪ್ತಿ
ಬೆಂಗಳೂರು ಗ್ರಾಮಾಂತರ ದ ದೇವನಹಳ್ಳಿ ಯ ನವಯುಗ ಚೆಕ್ ಪೋಸ್ಟ್ ಬಳಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಾಲಕ ನವೀನ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಾರವಾರದಲ್ಲಿ ಸೈಲ್ಗೆ ಶಾಕ್
ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಸತೀಶ್ ಸೈಲ್ ಅವರ ಆಪ್ತ ಮಂಗಲದಾಸ್ ಕಾಮತ್ ಅವರ ಅಂಕೋಲದ ಆವರ್ಸಾ ಗ್ರಾಮದ ನಿವಾಸದ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನಲ್ಲೂ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ