5 ಲಕ್ಷ ರೂ. ಪರಿಹಾರ ನೀಡಿದ ಸಿಎಂ
Team Udayavani, Aug 1, 2018, 6:00 AM IST
ಬೆಂಗಳೂರು: ಅತಿ ಅಪರೂಪದ ಎಪಿಡರ್ ಮುಲ್ಲಾಯಿಸಿಸ್ ಬುಲ್ಲೂಸಾ (ಮೈಮೇಲೆ ಗುಳ್ಳೆಗಳೆದ್ದು ಅಡು ಒಡೆದು ನೋವಿನಿಂದ ಬಳಲುವುದು) ಎಂಬ ಜನೆಟಿಕ್ ಕಾಯಿಲೆಗೆ ತುತ್ತಾದ ಇಬ್ಬರು ಎಳೆಯ ಮಕ್ಕಳು ದಯಾಮರಣಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡು ಬಂದಿದ್ದರು. ಆ ಮಕ್ಕಳ ಪೋಷಕರಿಗೆ ತಮ್ಮ ಪರಿಹಾರ ನಿಧಿಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ನೀಡಿದ್ದಾರೆ.
ಅಲ್ಲದೆ, ಆ ಮಕ್ಕಳ ತಂದೆಗೆ ಸವದತ್ತಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ಕೆಲಸ ನೀಡಬೇಕು ಮತ್ತು ಮಕ್ಕಳಿಗೆ ಅದೇ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಬೇಕು ಎಂದು ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ. ಸವದತ್ತಿಯ ದೀಪಾ ಮತ್ತು ಯಂಕಪ್ಪ
ಪೂಜಾರಿ ಅವರ ಇಬ್ಬರು ಎಳೆಯ ಮಕ್ಕಳು ಎಪಿಡರ್ ಮುಲ್ಲಾಯಿಸಿಸ್ ಬುಲ್ಲೂಸಾ ಎಂಬ ಜನೆಟಿಕ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ದೇಹವಿಡೀ ಗುಳ್ಳೆಗಳು ಎದ್ದು ಅದು ಒಡೆದು ಮಕ್ಕಳು ಪ್ರತಿ ಕ್ಷಣವೂ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ. ಮಕ್ಕಳ ಕಷ್ಟ ನೋಡಲು ಆಗುವುದಿಲ್ಲ. ಆದ್ದರಿಂದ ಅವರಿಗೆ ದಯಾಮರಣ ಕರುಣಿಸಿ ಎಂದು ಕೋರಿ ದಂಪತಿ ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?