RSS ಬೈಠಕ್ ರದ್ದು; BJP ಭಿನ್ನಮತ ಶಮನಕ್ಕೆ ಬಿಎಸ್ ವೈ ಸರ್ಕಸ್
Team Udayavani, Jan 16, 2017, 1:33 PM IST
ಬೆಂಗಳೂರು:ಬಿಜೆಪಿಯೊಳಗಿನ ಭಿನ್ನಮತ ಶಮನಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜ.19ರಂದು ಸಭೆ ಕರೆದ ಹಿನ್ನೆಲೆಯಲ್ಲಿ ನಾಳೆಯ ಆರ್ಎಸ್ಎಸ್ ಬೈಠಕ್ ಅನ್ನು ರದ್ದುಗೊಳಿಸಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ.
ತನ್ನ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನ ಮತಕ್ಕೆ ಪಕ್ಷದ ಕೆಲವು ನಿಷ್ಠಾವಂತರು ಬೆಂಬಲ ಸೂಚಿಸುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಎಚ್ಚೆತ್ತುಕೊಂಡಿದ್ದು, ಅಸಮಾಧಾನ ಶಮನಕ್ಕೆ ಮುಂದಾಗಿದ್ದರು. ಆ ಕಾರಣಕ್ಕಾಗಿ ಜನವರಿ 19ರಂದು ಬಿಜೆಪಿ ಕಚೇರಿಯಲ್ಲಿ ಸಭೆ ಕರೆದಿದ್ದರು. ಅತೃಪ್ತಿ ಹೊಂದಿರುವ 24 ಶಾಸಕರು ಹಾಗೂ ರಾಯಣ್ಣ ಬ್ರಿಗೇಡ್ ಗೆ ಸಂಬಂಧಿಸಿದಂತೆ ವೈಮನಸ್ಸು ಹೊಂದಿರುವ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪನವರಿಗೂ ಯಡಿಯೂರಪ್ಪ ಆಹ್ವಾನ ನೀಡಿದ್ದರು.
ಬಿಜೆಪಿಯ ಹಿರಿಯ ಮುಖಂಡರಾದ ಬಿಎಸ್ ವೈ ಮತ್ತು ಕೆಎಸ್ ಈಶ್ವರಪ್ಪ ನಡುವಿನ ಜಗಳದಿಂದ ಮುಜುಗರಕ್ಕೀಡಾಗಿರುವ ನಿಟ್ಟಿನಲ್ಲಿ, ಭಿನ್ನಮತ ಶಮನಕ್ಕಾಗಿ ಆರ್ಎಸ್ಎಸ್ ಜನವರಿ 17ರಂದು ಬೈಠಕ್ ಕರೆದಿತ್ತು. ಸಭೆಗೆ ಆಗಮಿಸುವಂತೆ ಬಿಎಸ್ ವೈ ಮತ್ತು ಈಶ್ವರಪ್ಪಗೆ ಆಹ್ವಾನ ನೀಡಲಾಗಿತ್ತು. ಏತನ್ಮಧ್ಯೆ ಬಿಎಸ್ ಯಡಿಯೂರಪ್ಪನವರೇ ಭಿನ್ನಮತ ಶಮನಕ್ಕೆ ಜ.19ರಂದು ಸಭೆ ಕರೆದ ನಿಟ್ಟಿನಲ್ಲಿ ಆರ್ ಎಸ್ಎಸ್ ಬೈಠಕ್ ಅನ್ನು ರದ್ದುಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!