ಮೇಕೆದಾಟು ಯೋಜನೆ ಪರವಾಗಿ ಸಂಸದರೆಲ್ಲ ಒಟ್ಟಾಗಿದ್ದೇವೆ: ಡಿವಿಎಸ್
Team Udayavani, Aug 9, 2021, 6:20 AM IST
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ಬಿಜೆಪಿ ಸಂಸದರೆಲ್ಲರೂ ಒಂದಾಗಿದ್ದೇವೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಮನವೊಲಿಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಕುಡಿಯುವ ನೀರಿನ ಹಕ್ಕು ನಮ್ಮದಾಗಿದ್ದು, ಅದನ್ನು ಪಡೆದೇ ಸಿದ್ಧ. ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆಯಾಗದು. ಅವರಿಗೆ ಹಂಚಿಕೆಯಾಗುವ ನೀರಿನಲ್ಲೂ ವ್ಯತ್ಯಾಸ ವಾಗುವುದಿಲ್ಲ. ಸದ್ಯ ಪ್ರಕರಣವು ಕಾವೇರಿ ನದಿನೀರು ನಿರ್ವಹಣ ಮಂಡಳಿ ಮುಂದಿರುವುದರಿಂದ ಅಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದೇವೆ ಎಂದರು.
ಕಾಂಗ್ರೆಸ್ ವಿರುದ್ಧ ಟೀಕೆ:
ಕಾಂಗ್ರೆಸ್ ಸದಸ್ಯರು ವಿನಾಕಾರಣ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಸಮಗ್ರತೆಗೆ ಪೂರಕವಾದ ಯೋಜನೆ ಮತ್ತು ಕಾಯ್ದೆಗಳ ಅನುಷ್ಠಾನ ಕಾಂಗ್ರೆಸ್ ಇಷ್ಟವಿಲ್ಲ. ಹೀಗಾಗಿ ಕಲಾಪ ನಡೆಯದಂತೆ ಮಾಡುತ್ತಿರುವ ಕಾಂಗ್ರೆಸ್ ಮುಂದೆ ದೊಡ್ಡ ನಷ್ಟ ಅನುಭವಿಸಲಿದೆ. ಕಾಂಗ್ರೆಸ್ನವರು ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಪೆಗಾಸಸ್ ಕಾಂಗ್ರೆಸ್ನ ಟೂಲ್ ಕಿಟ್ ಪ್ರಕರಣದ ಮುಂದುವರಿದ ಭಾಗವಾಗಿದೆ. ಕಾಂಗ್ರೆಸ್ ಯಾವುದೇ ಚರ್ಚೆಗೂ ಬಾರದೆ ಹಿಟ್ ಆ್ಯಂಡ್ ರನ್ ಪಾಲಿಸಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ