ಮಂಗನ ಕಾಯಿಲೆಗೆ ಸಾಗರ ಮಹಿಳೆ ಬಲಿ
Team Udayavani, Jan 12, 2020, 3:00 AM IST
ಸಾಗರ: ಕಳೆದ ವರ್ಷದಿಂದ ಮಲೆನಾಡಿನ ಸಾಗರ ತಾಲೂಕನ್ನು ತೀವ್ರವಾಗಿ ಕಾಡುತ್ತಿರುವ ಮಂಗನ ಕಾಯಿಲೆ ಈ ಬಾರಿ ವರ್ಷಾರಂಭದಲ್ಲೇ ಮೊದಲ ಬಲಿ ಪಡೆದಿದೆ. ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಚದರವಳ್ಳಿ ಸಮೀಪದ ಶೀಗೆಮಕ್ಕಿಯ ಹೂವಮ್ಮ (58) ಶನಿವಾರ ಚಿಕಿತ್ಸೆ ಫಲಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜ.8ರಂದು ಜ್ವರ ಕಾಣಿಸಿಕೊಂಡಾಗ ಕೆಎಫ್ಡಿ ವೈರಸ್ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ರಕ್ತ ಪರೀಕ್ಷೆ ನಡೆಸಲಾಗಿತ್ತು. ಗುರುವಾರವಷ್ಟೇ ಇವರ ದೇಹದಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಇರುವುದು ದೃಢಪಟ್ಟಿತ್ತು.
ಚಿಕಿತ್ಸೆ ಮುಂದುವರಿದಿದ್ದರೂ ಅವರ ಆರೋಗ್ಯದಲ್ಲಿ ಸುಧಾರಣೆ ಆಗಿರಲಿಲ್ಲ. ಇವರ ಮನೆಯಲ್ಲಿನ ಎಲ್ಲರೂ ಕೆಎಫ್ಡಿ ಲಸಿಕೆ ಹಾಕಿಸಿಕೊಂಡಿದ್ದರೂ ಹೂವಮ್ಮ ಮಾತ್ರ ಹಾಕಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಕಳೆದ ವರ್ಷ ತಾಲೂಕಿನ ಅರಳಗೋಡು ಭಾಗದಲ್ಲಿ 23 ಜನ ಕೆಎಫ್ಡಿಗೆ ಬಲಿಯಾದುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ