ಸಹಸ್ರ ಚಂಡಿಕಾ ಯಾಗ ಸಂಪನ್ನ
Team Udayavani, Jan 22, 2020, 3:00 AM IST
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಕೈಗೊಂಡಿದ್ದ ಸಹಸ್ರ ಚಂಡಿಕಾ ಯಾಗ, ಪೂರ್ಣಾಹುತಿ ಯೊಂದಿಗೆ ಮಂಗಳವಾರ ಸಂಪನ್ನಗೊಂಡಿತು.
ಶ್ರೀ ಮಠದ ಎದುರಿನ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಜ.17ರಂದು ಎಚ್.ಡಿ.ದೇವೇಗೌಡ ಮತ್ತು ಚನ್ನಮ್ಮ ಚಂಡಿಕಾ ಯಾಗದ ಸಂಕಲ್ಪ ಕೈಗೊಂಡಿದ್ದರು. ಕುಡ್ನಲ್ಲಿ ಲಕ್ಷ್ಮೀ ನಾರಾಯಣ ಸೋಮಯಾಜಿ ನೇತೃತ್ವದ 100 ಋತ್ವಿಜರ ತಂಡ ಯಾಗ ನೆರವೇರಿಸಿತು. ಕಳೆದ 5 ದಿನಗಳಿಂದಲೂ ದೇವೇಗೌಡ ದಂಪತಿ ಶ್ರೀಮಠದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಮೊದಲ ದಿನ ಗಣಪತಿ ಹೋಮ ನಡೆಸಿದ ನಂತರ ಚಂಡಿಕಾಯಾಗ ಆರಂಭಿಸಲಾಗಿತ್ತು. ಯಾಗದ ಪ್ರಯುಕ್ತ ಪ್ರತಿ ದಿನವೂ ಪಾರಾಯಣ, ಜಪ ನಡೆಸಲಾಯಿತು.
ಮಂಗಳವಾರ ಪೂರ್ಣಾಹುತಿಯಲ್ಲಿ ಶ್ರೀ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಉಪಸ್ಥಿತರಿದ್ದರು. ದೇವೇಗೌಡ ಮತ್ತು ಚನ್ನಮ್ಮ ಅವರೊಂದಿಗೆ ಕುಟುಂಬದ ಎಚ್.ಡಿ.ರೇವಣ್ಣ, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರಮೇಶ್, ಎಚ್.ಡಿ.ಬಾಲಕೃಷ್ಣ, ಶೈಲಾ, ಅನುಸೂಯಾ, ಸೊಸೆ ಅನಿತಾ ಕುಮಾರಸ್ವಾಮಿ, ಮೊಮ್ಮಕ್ಕಳು ಭಾಗವಹಿಸಿದ್ದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಶಾಸಕ ಟಿ.ಡಿ.ರಾಜೇಗೌಡ, ಜೆಡಿಎಸ್ ಮುಖಂಡರಾದ ಎಚ್.ಜಿ.ವೆಂಕಟೇಶ್, ದಿವಾಕರ ಭಟ್, ಜಿ.ಜಿ.ಮಂಜುನಾಥ್, ಭರತ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್