ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ತಲೆಮರೆಸಿಕೊಂಡಿದ್ದ ಆದಿತ್ಯ ಆಳ್ವ ಬಂಧನ
Team Udayavani, Jan 12, 2021, 7:45 AM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ, ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವನನ್ನು ಕೊನೆಗೂ ಬಂಧಿಸಲಾಗಿದೆ. ಪ್ರಕರಣದ ಎ6 ಆರೋಪಿಯಾಗಿರುವ ಆದಿತ್ಯ ಆಳ್ವನನ್ನು ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ಚೆನ್ನೈ ನಲ್ಲಿ ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸದ್ದು ಮಾಡುತ್ತಿದ್ದಂತೆ ಆದಿತ್ಯ ಆಳ್ವನ ಹೆಸರು ಕೇಳಿಬಂದಿತ್ತು. ಆದರೆ ಆದಿತ್ಯ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಕಳೆದ ಸಪ್ಟೆಂಬರ್ ನಲ್ಲಿ ಆದಿತ್ಯ ಆಳ್ವನಿಗೆ ಸೇರಿದ ರೆಸಾರ್ಟ್ ಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು.
ಇದನ್ನೂ ಓದಿ:ಸೌದಿಯ ಹೊಸ ಸಿಟಿಯಲ್ಲಿ ರಸ್ತೆಯೂ ಇರಲ್ಲ, ವಾಹನವೂ ಓಡಾಡಲ್ಲ!
ಆದಿತ್ಯ ಸಹೋದರಿ, ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಾಗೆ ಸಿಸಿಬಿ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ಸದ್ಯ ಆದಿತ್ಯ ಆಳ್ವನನ್ನು ಬೆಂಗಳೂರಿನ ಸಿಸಿಬಿ ಕಚೇರಿಗೆ ಕರೆತರಲಾಗಿದೆ.