ಹಿಂದಿನ ಸಮಿತಿಗಳ ಪಠ್ಯದಲ್ಲೂ ದೋಷ: ಸಾಣೆಹಳ್ಳಿ ಶ್ರೀ
Sanehalli Sri Panditharadhy Shivacharya Swamiji
Team Udayavani, Jun 21, 2022, 11:40 PM IST
ಬೆಂಗಳೂರು: ಬಸವಣ್ಣನವರ ಕುರಿತ ಪಾಠದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯಷ್ಟೇ ಅಲ್ಲ, ಇದಕ್ಕೂ ಹಿಂದಿನ ಪ್ರೊ| ಬರಗೂರು ರಾಮಚಂದ್ರಪ್ಪ ಸಮಿತಿ ಹಾಗೂ ಪ್ರೊ| ಮುಡಂಬಡಿತ್ತಾಯ ಅಧ್ಯಕ್ಷತೆಯ ಸಮಿತಿಗಳು ರೂಪಿಸಿರುವ ಪಾಠದಲ್ಲಿಯೂ ದೋಷಗಳಿದ್ದವು ಎಂದು ಸಾಣೇಹಳ್ಳಿಯ ಡಾ| ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಾಣೆಹಳ್ಳಿ ಸ್ವಾಮೀಜಿಯವರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪರಿಷ್ಕರಣ ಸಮಿತಿಯವರು ಹೊರ ತಂದಿರುವ 9ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ಪಠ್ಯದಲ್ಲಿ ಬಸವಣ್ಣನವರ ಬಗೆಗಿನ ಪಾಠದಲ್ಲಿ ದೋಷಗಳಿವೆ. ಇವರಿಗಿಂತ ಹಿಂದೆ ಪ್ರೊ| ಬರಗೂರು ರಾಮಚಂದ್ರಪ್ಪನವರು ಮತ್ತು ಪ್ರೊ| ಜಿ.ಎಸ್. ಮುಡಂಬಡಿತ್ತಾಯ ಅವರು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದರು. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಪಠ್ಯ ರಚನ ಸಮಿತಿಯವರು ಬಸವೇಶ್ವರ ಎನ್ನುವ ಪಾಠದಲ್ಲಿ ಇತಿಹಾಸಕ್ಕೆ ಪೂರಕವಲ್ಲದ ಬಸವ ತಣ್ತೀಕ್ಕೆ ಅಪಚಾರ ಮಾಡುವ ವಿಷಯಗಳನ್ನೇ ಸೇರಿಸಿದ್ದರು.
ಬರಗೂರು ರಾಮಚಂದ್ರಪ್ಪನವರ ಸಮಿತಿಯವರು ಈ ಪಠ್ಯದಲ್ಲಿ ಸಾಕಷ್ಟು ಪರಿಷ್ಕಾರ ಮಾಡಿದ್ದರು. ಅವರ ಪಠ್ಯದಲ್ಲೂ ವೀರಶೈವ ಸಿದ್ಧಾಂತವನ್ನು ಪ್ರಚುರಪಡಿಸಿದರು. “ಶೈವ ಗುರುಗಳ ಸಾನ್ನಿಧ್ಯದಲ್ಲಿ ಲಿಂಗದೀಕ್ಷೆಯನ್ನು ಪಡೆದು’ ಎನ್ನುವ ದೋಷಗಳಿವೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಹಿಂದಿನ ಪಠ್ಯಗಳನ್ನು ಬಿಟ್ಟು ಹೊಸದಾಗಿ ಬರೆಸಿ ವಿದ್ಯಾರ್ಥಿಗಳಿಗೆ ಕೊಡುವುದು ಉತ್ತಮ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.