ಮೈಸೂರೇ ಬೇಕು ಅಂತ ಹಠ ಮಾಡಿ ಬಂದ್ರಲ್ಲ.. ಇಲ್ಲಿ ಏನ್ ಮಾಡ್ತಾ ಇದ್ದೀರ ; ಸಾರಾ ಮಹೇಶ್ ಕಿಡಿ
Team Udayavani, Apr 28, 2021, 11:41 AM IST
ಮೈಸೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಸೋಂಕಿನ ಅಬ್ಬರ ಜಾಸ್ತಿಯಾಗ್ತಾ ಇದೆ. ಇದೇ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರ ಮೇಲೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಕಿಡಿಕಾರಿದ್ದಾರೆ.
ಜಿಲ್ಲಾ ಮಂತ್ರಿಗಳೇ ಬದುಕಿದ್ದೀರ.. ಮೈಸೂರು ಜಿಲ್ಲಾಡಳಿತ ಇದೆಯೇ? ಏನ್ ಮಾಡ್ತಿದೆ. ಮೈಸೂರಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲದೆ ಜನ ಸಾಯ್ತಾ ಇದ್ದಾರೆ ಅಂತ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹರಿ ಹಾಯ್ದಿದ್ದಾರೆ.
ನನ್ನ ಕ್ಷೇತ್ರದ ಮಹಿಳೆಯೊಬ್ಬರು ಆಕ್ಸಿಜನ್, ಬೆಡ್ ಇಲ್ಲದೆ ಸಾವನ್ನಪ್ಪಿದ್ದಾಳೆ. ಕೆ.ಆರ್ ನಗರ ತಾಲ್ಲೂಕು ಆಸ್ಪತ್ರೆಯ ಎರಡು ವೆಂಟಿಲೇಟರ್ ತರಿಸಿಕೊಟ್ರೂ ಅದನ್ನ ಫಿಕ್ಸ್ ಮಾಡಲಿಲ್ಲ. ನಾನು ರಾಜಕಾರಣ ಮಾಡುವುದಾಗಿದ್ರೆ ಆ ಮಹಿಳೆ ಶವವನ್ನ DHO ಕಚೇರಿ ಮುಂದೆ ಇಟ್ಟು ಪ್ರತಿಭಟನೆ ಮಾಡಬಹುತಿತ್ತು ಎಂದು ಕಿಡಿ ಕಾರಿದ್ದಾರೆ.
ಮೈಸೂರಿನಲ್ಲೇ ಪೋಸ್ಟಿಂಗ್ ಬೇಕು ಅಂತ ಬಂದ್ರಲ್ಲ, ಇಲ್ಲಿ ಏನ್ ಮಾಡ್ತಿದ್ದೀರ.. ಕಾರಿನ ಟೈರ್ ಪಂಕ್ಚರ್ ಹಾಕುವ ವಿಡಿಯೋ ಮಾಡಿಸಿ ಪಬ್ಲಿಸಿಟಿ ಪಡೆಯೋದಲ್ಲ.
ಬೆಂಗಳೂರು ಸ್ಥಿತಿಯನ್ನ ಮೈಸೂರಿಗೆ ತಂದೊಡ್ಡಬೇಡಿ. ಮೃತ ಕುಟುಂಬಗಳ ಶಾಪ ನಿಮಗೆ ತಟ್ಟದೆ ಇರದು ಎಂದು ಸಿಂಧೂರಿ ಮೇಲೂ ಮಹೇಶ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್