ಸರಸ್ವತಿಪುರಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿಯ ಬಂಧನ
Team Udayavani, Sep 16, 2020, 1:00 PM IST
ಮೈಸೂರು: ಸರಸ್ವತಿಪುರಂ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶರತ್, ಸುಮಂತ್, ಧರ್ಮೇಶ್, ಶಶಾಂಕ್, ದಿನೇಶ್.ಸುನೀಲ್ ಕುಮಾರ್, ಕಾರ್ತಿಕ್, ಮಹದೇವ್ ಎಂದು ಗುರುತಿಸಲಾಗಿದೆ. ಇವರಿಂದ ಕೃತ್ಯಕ್ಕೆ ಬಳಸಲಾಗುತ್ತಿದ್ದ 1 ಮಾರುತಿ ವ್ಯಾನ್, 4 ಬೈಕ್, 11 ಮೊಬೈಲ್, 6ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಈ ಪ್ರಕರಣ ಸಂಬಂಧ 5 ಇತರೆ ಠಾಣೆಯ ಪ್ರಕರಣವನ್ನೂ ಪೊಲೀಸರು ಬೇಧಿಸಿದ್ದಾರೆ. ಸಂಚು ಮಾಡುತ್ತಿದ್ದ ವೇಳೆ ಲಾಂಗ್, ಹಾಕಿ ಸ್ಟಿಕ್, 5 ಪ್ಯಾಕೆಟ್ ಖಾರದಪುಡಿ, ಎರಡು ಡ್ರ್ಯಾಗರ್, ಮಂಕಿ ಕ್ಯಾಪ್, ವಿಕೆಟ್ಗಳು ಕೂಡ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತರಿಂದ ಹಲವು ಪ್ರಕರಣಗಳ ಮಾಹಿತಿ ಬೆಳಕಿಗೆ ಬಂದಿದೆ. ಆರೋಪಿಗಳು ದರೋಡೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದು, ಇವರ ಗುಂಪಿನಲ್ಲಿ 30 ಜನರು ಇರುವುದು ತಿಳಿದು ಬಂದಿದೆ. ಈಗ ಏಂಟು ಜನ ಸೆರೆ ಸಿಕ್ಕಿದ್ದಾರೆ. ಉಳಿದವರನ್ನು ಸದ್ಯದಲ್ಲೆ ಬಂಧಿಸಲಾಗುವುದು. ಬಂಧಿತರಿಂದ ಕೇಸ್ ದಾಖಲಾಗದ ಪ್ರಕರಣಗಳ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಇವರಿಂದ ಮುಂದೆ ಆಗಬೇಕಿದ್ದ ಅನಾಹುತಗಳು ತಪ್ಪಿವೆ ಎಂದು ಮೈಸೂರಿನಲ್ಲಿ ಡಿಸಿಪಿ ಪ್ರಕಾಶ್ ಗೌಡ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ