Sasya Shyamala; ಘೋಷಿಸಿದ್ದು 50 ಲಕ್ಷ, ಕೊಟ್ಟಿದ್ದು 4.39 ಲಕ್ಷ, ನೆಟ್ಟಿದ್ದು 3.79 ಲಕ್ಷ

ಯೋಜನೆ ಮಾಹಿತಿ ಕೊಡದೆ ಸತಾಯಿಸುತ್ತಿರುವ ಡಿಡಿಪಿಐಗಳು... ಇಲಾಖೆ ನಿರಾಸಕ್ತಿ

Team Udayavani, May 24, 2024, 6:45 AM IST

1-wqeq-ewq

ಬೆಂಗಳೂರು: ಸರಕಾರಿ ಶಾಲಾ ಆವರಣಗಳಲ್ಲಿ ಕನಿಷ್ಠ 50 ಲಕ್ಷ ಸಸಿ ನೆಡಬೇಕೆನ್ನುವ ದೃಷ್ಟಿಯಿಂದ ಬಜೆಟ್‌ನಲ್ಲಿ ಘೋಷಿಸಿದ್ದ “ಸಸ್ಯ ಶ್ಯಾಮಲಾ’ ಯೋಜನೆಗೆ ಶಿಕ್ಷಣ ಇಲಾಖೆ ನಿರಾಸಕ್ತಿ ತೋರಿದ್ದು, 2023-24ನೇ ಸಾಲಿನಲ್ಲಿ ನೆಟ್ಟ ಗಿಡದ ಮಾಹಿತಿ ಕೊಡದೇ ಜಿಲ್ಲಾ ಉಪನಿರ್ದೇಶಕ (ಡಿಡಿಪಿಐ)ರು ಸತಾಯಿಸುತ್ತಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿದೆ.

ಶಾಲಾ ಆವರಣಗಳ ಹಸುರೀಕರಣದ ಜತೆಗೆ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ ಮೂಡಿಸಲು ಶಿಕ್ಷಣ ಹಾಗೂ ಅರಣ್ಯ ಇಲಾಖೆ ಈ ಯೋಜನೆಯನ್ನು ಅನುಷ್ಠಾನ ಗೊಳಿಸುವ ಹೊಣೆ ಹೊತ್ತಿದ್ದವು. ವರ್ಷಕ್ಕೆ 50 ಲಕ್ಷ ಸಸಿಗಳಂತೆ 5 ವರ್ಷಗಳಲ್ಲಿ 2.5 ಕೋಟಿ ಸಸಿ ನೆಡುವ ಈ ಯೋಜನೆ ಮೊದಲ ವರ್ಷವೇ ಯೋಜನೆ ವಿಫ‌ಲವಾಗಿದೆ.

ನೆಟ್ಟವುಗಳಲ್ಲಿ ಬದುಕಿದವು ಎಷ್ಟು?
ರಾಜ್ಯಾದ್ಯಂತ ಸರಿಮಾರು 49 ಸಾವಿರ ಶಾಲೆಗಳಿದ್ದು, ಪ್ರತಿ ಶಾಲೆ ಆವರಣದಲ್ಲಿ ಗರಿಷ್ಠ 50 ಸಸಿ ನೆಡಬೇಕು. ಉತ್ತರ ಕರ್ನಾ ಟಕದ 17 ಜಿಲ್ಲೆಗಳಲ್ಲಿ ಗರಿಷ್ಠ 100 ಸಸಿ ನೆಡುವ ಗುರಿ ಕೊಡಲಾಗಿತ್ತು. ಅಲ್ಲದೆ ಪ್ರತಿ ಗಿಡಕ್ಕೂ ಜಿಯೋ ಟ್ಯಾಗ್‌ ಮಾಡಬೇಕು, 5 ವರ್ಷಗಳ ಬಳಿಕ ಆಡಿಟ್‌ ಮಾಡಬೇಕು ಅಂದರೆ ಯಾವ್ಯಾವ ಶಾಲೆಗಳ ಆವರಣದಲ್ಲಿ ಎಷ್ಟೆಷ್ಟು ಗಿಡ ನೆಡಲಾಗಿದೆ? ನೆಟ್ಟವುಗಳ ಪೈಕಿ ಉಳಿದವು ಎಷ್ಟು? ಪೋಷ ಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಇತ್ಯಾದಿ ಮಾಹಿತಿಯನ್ನು ಡಿಡಿಪಿಐಗಳಿಂದ ಕೇಳಲಾಗಿತ್ತು.

ಎಲ್ಲಿ ಹೋದವು 60 ಸಾವಿರ ಸಸಿ?
ನೆಟ್ಟ ಗಿಡಗಳ ಬಗೆಗಿನ ಪ್ರತಿಯೊಂದು ಮಾಹಿತಿಯನ್ನೂ ಸಸ್ಯ ಶ್ಯಾಮಲಾ ಪೋರ್ಟ ಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಡಿಡಿಪಿಐಗಳಿಗೆ ಸೂಚಿಸಲಾಗಿತ್ತಾದರೂ ಪೂರ್ಣವಾಗಿ ಮಾಡಿಲ್ಲ. ಪ್ರೌಢಶಾಲೆಗಳ ಆವರಣದಲ್ಲಿ ನೆಡುವ ಸಲುವಾಗಿ ಅರಣ್ಯ ಇಲಾಖೆಯಿಂದ 4,39,310 ಸಸಿ ಪಡೆದಿ ರುವುದಾಗಿ ಪೋರ್ಟಲ್‌ನಲ್ಲಿ ಇಂಡೀಕರಿಸಿದ್ದು, ಈ ಪೈಕಿ 3,79,109 ಸಸಿ ಗಳನ್ನು ನೆಟ್ಟಿರುವುದಾಗಿ ಅಪ್‌ಲೋಡ್‌ ಮಾಡಲಾಗಿದೆ. ಹಾಗಿದ್ದರೆ ಅರಣ್ಯ ಇಲಾಖೆ ಯಿಂದ ಪಡೆದ 60,201 ಸಸಿಗಳು ಏನಾ ದವು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

2023-24ನೇ ಸಾಲಿನ ಪ್ರಗತಿ ವರದಿ ಸಲ್ಲಿಸುವಂತೆ ಪ್ರೌಢಶಿಕ್ಷಣ ನಿರ್ದೇಶಕ ಕೃಷ್ಣಾಜೀ ಕರಿಚನ್ನಣ್ಣವರ್‌ ಡಿಡಿಪಿಐಗಳಿಗೆ ಜ್ಞಾಪನ ಪತ್ರ ರವಾನಿಸಿದ್ದು, ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಹಲವು ಬಾರಿ ಸೂಚಿಸಿದರೂ ಮಾಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಯೋಜನೆಗೆ ಹಿನ್ನಡೆ ಆಗಿದ್ದೇಕೆ?
ಬಜೆಟ್‌ನಲ್ಲಿ ಘೋಷಣೆಯಾದ ಕೆಲವೇ ಸಮಯದಲ್ಲಿ ಶಿಕ್ಷಣ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಎರಡೂ ಇಲಾಖೆಗಳು ಸಸ್ಯಶ್ಯಾಮಲಾ ಯೋಜನೆಗೆ ಮಾರ್ಗಸೂಚಿ ರೂಪಿಸಿದ್ದೇ ಸೆಪ್ಟಂಬರ್‌ ತಿಂಗಳಲ್ಲಿ. ಆ ವೇಳೆಗಾಗಲೇ ರಾಜ್ಯಾದ್ಯಂತ ಬರಗಾಲ ಆವರಿಸಿತ್ತು. ಅಲ್ಲದೆ, ಶಾಲೆಗಳ ಆವರಣದಲ್ಲಿ ಗಿಡ ನೆಡಲು ಸ್ಥಳಗಳನ್ನೂ ಗುರುತಿಸದೆ ಯೋಜನೆ ಘೋಷಿಸಿದ್ದು ಹಿನ್ನಡೆಗೆ ಕಾರಣವಾಗಿದೆ ಎಂದು ಇಲಾಖೆ ಉನ್ನತಾಧಿಕಾರಿಗಳು ತಿಳಿಸುತ್ತಾರೆ.

ಪ್ರತಿ ಶಾಲೆ ಆವರಣದಲ್ಲಿ ಎಷ್ಟು ಸಸಿ ನೆಡಲಾಗಿದೆ ಎನ್ನುವ ಪ್ರಗತಿ ಕುರಿತು ಸಸ್ಯಶ್ಯಾಮಲಾ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ರಾಜ್ಯದ ಎಲ್ಲ ಡಿಡಿಪಿಐಗಳಿಗೆ ಹಲವು ಬಾರಿ ಸೂಚಿಸಲಾಗಿದೆ. ಸಾಧಿಸಿರುವ ಪ್ರಗತಿಯನ್ನು ವಿಳಂಬ ಮಾಡದೇ ಅಪ್‌ಲೋಡ್‌ ಮಾಡುವಂತೆ ಆಯುಕ್ತರ ಆದೇಶದ ಮೇರೆಗೆ ತಿಳಿಸಿದೆ.
ಕೃಷ್ಣಾಜೀ ಕರಿಚನ್ನಣ್ಣವರ್‌, ಪ್ರೌಢಶಿಕ್ಷಣ ನಿರ್ದೇಶಕ

 ಶೇಷಾದ್ರಿ ಸಾಮಗ

ಟಾಪ್ ನ್ಯೂಸ್

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಕೆಪಿಸಿಸಿ ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

KPCC ಸಭೆಯಲ್ಲಿ ವಿವಿಧ ಅಕಾಡೆಮಿ ಅಧ್ಯಕ್ಷರು ಭಾಗಿ: ಸುನಿಲ್‌

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.