ಸತೀಶ ಜಾರಕಿಹೊಳಿ ತಲೆ ಸರಿಯಿಲ್ಲ: ರಮೇಶ
Team Udayavani, Sep 7, 2019, 3:00 AM IST
ಬೆಳಗಾವಿ: “ಮಾಜಿ ಸಚಿವ ಸತೀಶ ಜಾರಕಿಹೊಳಿ ತಲೆ ಸರಿಯಲ್ಲ. ಅವರನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಬೇಕಿದೆ’ ಎಂದು ಗೋಕಾಕ ಕ್ಷೇತ್ರದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಎಂದಿಗೂ ಪ್ರಚಾರ ಪ್ರಿಯನಲ್ಲ.
ನನ್ನ ಹೆಸರನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಕಿಡಿಕಾರಿದರು “ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೊದಲಿಂದಲೂ ನನ್ನ ಉತ್ತಮ ಗೆಳೆಯ. ಅವನ ಕಷ್ಟ ಕಾಲದಲ್ಲಿ ನಾನು ಅವರೊಂದಿಗೆ ಇರುತ್ತೇನೆ. ದೆಹಲಿಗೆ ಹೋದ ಬಳಿಕ ಅವರನ್ನು ಭೇಟಿಯಾಗುತ್ತೇನೆ. ರಾಜಕೀಯ ಬೇರೆ. ವೈಯಕ್ತಿಕ ಸಂಬಂಧ ಬೇರೆ. ಇದೇ ಕಾರಣಕ್ಕೆ ನಾನು ಅವರನ್ನು ಭೇಟಿ ಮಾಡುತ್ತೇನೆ.
ಕಷ್ಟ ಕಾಲದಲ್ಲಿ ಅವರ ಜೊತೆ ಇರುತ್ತೇನೆ’ ಎಂದರು. ಕ್ಷೇತ್ರದ ಜನರನ್ನು ಮರೆತು ಯಾತ್ರೆ ಮಾಡುತ್ತಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “14ನೇ ಬಾರಿ ನಾನು ಉತ್ತರ ಭಾರತಕ್ಕೆ ಹೋಗಿದ್ದೇನೆ. ಅದರಲ್ಲಿ ಹೊಸದೇನಿಲ್ಲ. ದೇವರ ದರ್ಶನಕ್ಕೆ ಹೋದರೆ ಅದು ಮಜಾ ಮಾಡಲು ಹೋದಂತೆನಾ?’ ಎಂದು ಪ್ರಶ್ನಿಸಿದರು. “ಮಾಧ್ಯಮಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?