ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಮುಖ್ಯಮಂತ್ರಿಗಳೇ ಬರಬೇಕಾ? – ಸತೀಶ್ ಜಾರಕಿಹೊಳಿ
Team Udayavani, May 30, 2021, 5:52 PM IST
ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವದಾದರೆ ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಯಾಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್ ಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಬಿಮ್ಸ್ ಗೆ ತೆರಳಿ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು. ಮುಖ್ಯಮಂತ್ರಿಗಳೇ ಎಲ್ಲವನ್ನು ಮಾಡಲು ಆಗುವುದಿಲ್ಲ. ಒಂದು ವೇಳೆ ಮುಖ್ಯಮಂತ್ರಿ ಗಳೇ ಮಾಡುವದಾದರೆ ಸಚಿವರಿದ್ದು ಏನು ಪ್ರಯೋಜನ ಎಂದರು.
ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯರೇ ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಹೀಗಾಗಿ, ಜಿಲ್ಲೆಯಲ್ಲಿರುವ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುಸಚಿವರಾಗಬೇಕಿತ್ತು ಎಂದು ಹೇಳಿದರು.
ಇದನ್ನೂ ಓದಿ: ನಿಮ್ಮ ಆಕ್ಸಿಮೀಟರ್ ಖರ್ಚನ್ನು ಉಳಿಸಲಿದೆ ಕೇರ್ ಪ್ಲಿಕ್ಸ್ ವೈಟಲ್ಸ್ ಸ್ಮಾರ್ಟ್ ಫೋನ್ ಆ್ಯಪ್!
ನಾಯಕತ್ವ ಬದಲಾವಣೆ ಕುರಿತು ಬಿಜೆಪಿಯಲ್ಲಿ ಭುಗಿಲೆದ್ದಿರುವ ಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಇದಕ್ಕೆ 2023ರ ಮೇ ನಲ್ಲಿ ಉತ್ತರ ಸಿಗಲಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರಕರಣದ ಕುರಿತು ಪ್ರಸ್ತಾಪಿಸಿ ತನಿಖಾ ತಂಡ ಹಾಗೂ ನ್ಯಾಯಾಲಯದಿಂದಲೇ ಸತ್ಯಾಸತ್ಯತೆ ಹೊರಬರಬೇಕು. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ಈಗಾಗಲೇ ಸರ್ಕಾರಕ್ಕೆ ತಮ್ಮ ಅಭಿಪ್ರಾಯ ಮತ್ತು ಆಗ್ರಹವನ್ನು ತಿಳಿಸಿದ್ದಾರೆ ಎಂದು ಹೇಳಿದರು. ಅಂತಿಮ ವರದಿ ಬರಲಿ, ಸತ್ಯಾಸತ್ಯತೆ ತಿಳಿಯಲಿ ಅಲ್ಲಿಯವರೆಗೆ ಕ್ಲೀನ್ ಚಿಟ್ ಹಾಗೂ ಮುಂದಿನ ಹೋರಾಟದ ಬಗ್ಗೆಯಾಗಲಿ ಮಾತನಾಡಲು ಆಗುವುದಿಲ್ಲ ಎಂದರು.
ಪೂಜೆ ಹಾಗೂ ಹೋಮದಿಂದ ಕೋವಿಡ್ ಹೋಗುತ್ತದೆ ಎಂದರೆ ಮಾಡಲಿ, ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅದನ್ನು ವೈಜ್ಞಾನಿಕವಾಗಿ ಎಲ್ಲರ ಮುಂದೆ ಸಾಬೀತು ಮಾಡಬೇಕು. ಅದು ನಿಜವಾದರೆ ಕಾಂಗ್ರೆಸ್ ನಿಂದ ಅಂತವರಿಗೆ ಸನ್ಮಾನ ಮಾಡಲಾಗುವುದು ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಗೆ ಟಾಂಗ್ ನೀಡಿದರು.
ಹೋಮ, ಹವನ ಮಾಡುವುದು ಬಿಜೆಪಿಯವರಿಗೆ ಹೊಸದೇನಲ್ಲ. ಹೋಮದಿಂದ ಕೋವಿಡ್ ಹೋಗುತ್ತದೆ ಎನ್ನುವುದಾದರೆ ವೈದ್ಯರು, ಆಸ್ಪತ್ರೆ ಏಕೆ ಬೇಕು ಎಂದು ಸತೀಶ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!