ರಾಜ್ಯದ 105 ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸತ್ವ ಕಂಪನಿ ಒಡಂಬಡಿಕೆ

‘ರಾಷ್ಟ್ರೀಯ ಶಿಕ್ಷಣ ನೀತಿ-2020’ರ ಆಶಯಗಳಿಗೆ ಪೂರಕವಾಗಿ ಶಾಲೆಗಳ ಅಭಿವೃದ್ಧಿ

Team Udayavani, Sep 22, 2022, 7:35 PM IST

school

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2022’ ಆಶಯಗಳಿಗೆ ಪೂರಕವಾಗಿ ರಾಜ್ಯದ 105 ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸತ್ವ ಮೀಡಿಯಾ ಆ್ಯಂಡ್ ಕನ್ಸಲ್ಟಿಂಗ್ ಪ್ರೈ. ಲಿ. ಜತೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ.

ಬುಧವಾರ (ಸೆ.21) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ ಕೋರ್ಸ್ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು.

ರಾಜ್ಯದ ಯಾದಗಿರಿ, ಹಾವೇರಿ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಯ ಒಟ್ಟು 105 ಸರ್ಕಾರಿ ಶಾಲೆಗಳನ್ನು ಒಪ್ಪಂದದ ಅನ್ವಯ ಅಭಿವೃದ್ಧಿಪಡಿಸಲಾಗುತ್ತದೆ.

ಶಾಲೆಗಳು ಹಾಗೂ ಶಾಲೆಗಳ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಕಲಿಕೆ ಮತ್ತು ಫಲಿತಾಂಶ ಸುಧಾರಣೆ, ಮಕ್ಕಳ ನೋಂದಣಿ ಹೆಚ್ಚಳಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಪಠ್ಯಕ್ರಮ, ತರಗತಿಯಲ್ಲಿ ಬೋಧನೆ ಕ್ರಮಗಳ ಸುಧಾರಣೆ ಸೇರಿದಂತೆ ಇನ್ನಿತರ ಉತ್ತಮ ರೂಢಿಗಳ ಕುರಿತು ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಸಂಪನ್ಮೂಲ ಸಂಯೋಜಕರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳ ವೃತ್ತಿ ಸಾಮರ್ಥ್ಯವನ್ನು ವೃದ್ಧಿಪಡಿಸಲಾಗುತ್ತದೆ.

ಶಾಲೆಗಳಲ್ಲಿ ಅಗತ್ಯವಾದ ಎಲ್ಲ ಕಲಿಕಾ ಸಾಮಗ್ರಿಗಳನ್ನು ಒದಗಿಸುವುದು ಮತ್ತು ಉತ್ತಮಪಡಿಸುವುದು, ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕಂಪ್ಯೂಟರ್ ಲ್ಯಾಬ್ ಸೌಲಭ್ಯ ಒದಗಿಸಲಾಗುತ್ತದೆ.

ಸ್ಪೋಕನ್ ಇಂಗ್ಲೀಷ್, ‘ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ’ (STEM) ಲ್ಯಾಬ್, ನೈತಿಕ ವಿಜ್ಞಾನ ತರಗತಿ, ಉದ್ಯಮಶೀಲತೆ ಗುಣಗಳು, ಆಲೋಚನೆಗಳ ಕುರಿತು ತರಬೇತಿ, ಕೌಶಲ್ಯ ಮತ್ತು ಭವಿಷ್ಯದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಶಾಲಾಭಿವೃದ್ಧಿ ಸಮಿತಿ, ಶಾಲೆ ಮೇಲುಸ್ತುವಾರಿ ಸಮಿತಿ, ಪಾಲಕರು, ಹಳೇ ವಿದ್ಯಾರ್ಥಿಗಳನ್ನು ಸೇರಿಸಿ ಸಮುದಾಯಗಳ ತೊಡಗಿಸಿಕೊಳ್ಳುವಿಕೆ ಮೂಲಕ ಭವಿಷ್ಯದಲ್ಲಿ ಶಾಲೆಯನ್ನು ಅಭಿವೃದ್ಧಿಪಡಿಸುವ ಜತೆಗೆ ನಿರಂತರವಾಗಿ ಬೆಳವಣಿಗೆಯಾಗುವಂತೆ ನೋಡಿಕೊಳ್ಳುವ ಪ್ರಯತ್ನಗಳನ್ನು ಮಾಡುವ ಉದ್ದೇಶವಿದೆ.

‘‘ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ’ (ಡಯಟ್), ಶಿಕ್ಷಣ ಇಲಾಖೆಯ ಜತೆ ಸಂಯೋಜನೆಯೊಂದಿಗೆ ಕಾರ್ಯ ನಿರ್ವಹಿಸುವ ಮೂಲಕ ಈ ಶಾಲೆಗಳು, ಸಮೀಪದ ಇನ್ನಿತರ ಶಾಲೆಗಳಿಗೆ ಮಾದರಿಯಾಗಿ ಅಭಿವೃದ್ಧಿಯಾಗುವ ವಿಶ್ವಾಸವಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾದ ಬಿ.ಸಿ. ನಾಗೇಶ್ ಹೇಳಿದರು.

ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಹಾಗೂ ಸತ್ವ ಮೀಡಿಯಾ ಆ‌್ಯಂಡ್ ಕನ್ಸಲ್ಟಿಂಗ್ ಪ್ರೈ. ಲಿ.ನ ಶ್ರೀಕೃಷ್ಣ ಅವರು ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಸ್ಟಾರ್ಟಪ್ ವಿಷನ್ ಗ್ರೂಪ್‌ನ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.