ಸಾಹಿತಿ ಚಂದ್ರಶೇಖರ್ ಕಂಬಾರರ ಪತ್ನಿ ಸತ್ಯಭಾಮ ನಿಧನ: ಸಿಎಂ ಸಂತಾಪ
Team Udayavani, Jan 18, 2022, 11:51 AM IST
ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಅವರು ವಿಧಿವಶರಾಗಿದ್ದಾರೆ.
ಸತ್ಯಭಾಮ ಚಂದ್ರಶೇಖರ್ ಕಂಬಾರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ:ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ಕೋವಿಡ್ ಪ್ರಕರಣ ಪತ್ತೆ
ಎಚ್ ಡಿಕೆ ಸಂತಾಪ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸತ್ಯಭಾಮ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರರು, ಮತ್ತವರ ಕುಟುಂಬದ ಸದಸ್ಯರಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ