
ಮೀಸಲಾತಿ ವಿಚಾರದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಬಿಜೆಪಿ ಸರ್ಕಾರದಿಂದ ವಂಚನೆ: ಸುರ್ಜೇವಾಲಾ
Team Udayavani, Mar 21, 2023, 11:17 AM IST

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳನ್ನು ವಂಚಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಇದು ಸ್ವತಃ ಕೇಂದ್ರ ಸಚಿವ ಹಾಗೂ ರಾಜ್ಯದ ಸಂಸದ ನಾರಾಯಣಸ್ವಾಮಿ ನೀಡಿದ ಲಿಖಿತ ಉತ್ತರದಿಂದ ಸಾಬೀತಾಗಿದೆ. ಈ ವಂಚನೆ ಖಂಡಿಸುವ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದರು.
ಇದುವರೆಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಕೂಡ ಹೋಗಿಲ್ಲ. ಅಷ್ಟೇ ಅಲ್ಲ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 50ರಿಂದ ಶೇ. 56ಕ್ಕೆ ಹೆಚ್ಚಿಸುವ ಬಗ್ಗೆಯೂ ಪ್ರಸ್ತಾವನೆಯು ರಾಜ್ಯ ಸರ್ಕಾರದಿಂದ ಸಲ್ಲಿಕೆ ಆಗಿಲ್ಲ ಎಂದು ಹೇಳಿದೆ. ಇದು ಆ ಸಮುದಾಯಗಳಿಗೆ ಮಾಡಿದ ದೊಡ್ಡ ಮೋಸ ಎಂದು ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!
ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿರುವುದಾಗಿ ಹೇಳಿದೆ. ಈ ಸಂಬಂಧ ಸರ್ಕಾರ ಸಿದ್ಧಪಡಿಸಿರುವ ‘ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಸುಗ್ರೀವಾಜ್ಞೆ– 2022’ ಹೊರಡಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿತ್ತು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು