ಜ.22ಕ್ಕೆ ಶಾಲೆಗೆ ರಜೆ ಬೇಡ, ನೇರಪ್ರಸಾರ ಮಾಡಿ: ಖಾಸಗಿ ಶಾಲೆಗಳ ಒಕ್ಕೂಟ
Team Udayavani, Jan 18, 2024, 6:30 AM IST
ಬೆಂಗಳೂರು: ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನೂತ ನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರವನ್ನು ನಡೆಸುವಂತೆ ಖಾಸಗಿ ಶಾಲೆಗಳ ಒಕ್ಕೂಟ (ಕ್ಯಾಮ್ಸ್)ನ ಪ್ರಧಾನ ಕಾರ್ಯದರ್ಶಿ ಡಿ. ಶಶಿ ಕುಮಾರ್ ಖಾಸಗಿ ಶಾಲೆಗಳಿಗೆ ಸಲಹೆ ನೀಡಿದ್ದಾರೆ.
ಒಕ್ಕೂಟದ ಎಲ್ಲ ಸದಸ್ಯರು ಧಾರ್ಮಿಕ ಮನೋಭಾವವನ್ನು ಮಕ್ಕ ಳಿಗೆ ತಿಳಿಸುವ ಹಿನ್ನೆಲೆಯಲ್ಲಿ ಆಯಾ ಶಾಲೆ ಯಲ್ಲಿ ತಮ್ಮಲ್ಲಿರುವ ಲಭ್ಯ ವ್ಯವ ಸ್ಥೆಗೆ ಅನುಗುಣವಾಗಿ ಒಂದೂವರೆ ಘಂಟೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ವನ್ನು ನೇರ ಪ್ರಸಾರ ಮಾಡಬೇಕು. ಹೈಬ್ರಿಡ್ ಮಾದರಿಯಲ್ಲಿ ಪಾಠ ಮಾಡು ತ್ತಿರುವ ಶಾಲೆಗಳು ತಮ್ಮ ತರಗತಿಯಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ತಾಂತ್ರಿಕ ವ್ಯವಸ್ಥೆಯಲ್ಲಿ ನೇರ ಪ್ರಸಾರದಲ್ಲಿ ತೋರಿಸಬಹುದಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.
ರಜೆ ನೀಡುವುದು ಸರಿಯಲ್ಲ
ಜನವರಿ 22 ರಂದು ಸಾರ್ವತ್ರಿಕ ರಜೆ ಕೊಡು ವುದು ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ಒಂದು ವೇಳೆ ರಜೆ ನೀಡಿದರೆ ವಿದ್ಯಾರ್ಥಿಗಳು, ಆಟ ಅಥವಾ ಅನ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡು ಪ್ರಾಣ ಪ್ರತಿಷ್ಠೆ ಕಾರ್ಯ ಕ್ರಮವನ್ನು ನೋಡದಿ ರಬಹುದು ಎಂದು ಅವರು ಹೇಳಿದ್ದಾರೆ.