ಶಾಲೆ ದಿನಕ್ಕೊಂದು ಧ್ವನಿ: ಕೋವಿಡ್ ದೂರವಾಗಲಿ, ಅನಂತರ ಶಾಲೆ ಆರಂಭವಾಗಲಿ

ಸೋಂಕು ಶೂನ್ಯವಾಗುವ ತನಕ ತರಗತಿ ಬೇಡ; ಸರಕಾರ ಅನಗತ್ಯ ಗೊಂದಲ ಸೃಷ್ಟಿಸದಿರಲಿ

Team Udayavani, Jun 10, 2020, 7:10 AM IST

ಕೋವಿಡ್ ದೂರವಾಗಲಿ, ಅನಂತರ ಶಾಲೆ ಆರಂಭವಾಗಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ ಶೂನ್ಯಕ್ಕೆ ಬರುವವರೆಗೂ ಹತ್ತನೇ ತರಗತಿಯವರೆಗಿನ ತರಗತಿ ಆರಂಭಿಸುವುದು ಸಲ್ಲದು. ಸರಕಾರ ಅನಗತ್ಯ ಗೊಂದಲ ಸೃಷ್ಟಿಸುವ ಬದಲು ದೃಢ ನಿಲುವು ಪ್ರಕಟಿಸಬೇಕಿದೆ.

ತರಾತುರಿಯಲ್ಲಿ ಶಾಲೆ ಆರಂಭಿಸಿದರೆ ಮುಂದಾಗುವ ಸಮಸ್ಯೆ- ಸಂಕಷ್ಟಗಳಿಗೆ ಸರಕಾರವೇ ಹೊಣೆಯಾಗಬೇಕಾದೀತು.

ಶಾಲೆಗಳ ಆರಂಭಕ್ಕೆ ಅವಸರದ, ಗೊಂದಲದ ನಿರ್ಧಾರ- ಚಿಂತನೆಗಳಿಗೆ ಮುಂದಾಗುವುದು ಸರಿಯಲ್ಲ ಎನ್ನುವುದು ನನ್ನ ಅನಿಸಿಕೆ. ಶಾಲೆಗಳು 2-3 ತಿಂಗಳು ತಡವಾಗಿ ಆರಂಭವಾದರೆ ಜಗತ್ತು ಮುಳುಗುವುದಿಲ್ಲ. ಶೈಕ್ಷಣಿಕ ವರ್ಷದ ಪಠ್ಯ ಸರಿದೂಗಿಸಲು ಹಲವಾರು ಮಾರ್ಗಗಳಿವೆ. ಮುಖ್ಯವಾಗಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಸರಕಾರವು ವಾಸ್ತವಿಕ ನೆಲೆಗಟ್ಟಿನಲ್ಲಿ ಯೋಚಿಸಿ ಸ್ಪಷ್ಟ ನಿರ್ಧಾರಕ್ಕೆ ಬರುವುದು ಸೂಕ್ತ.

ಅಭಿಪ್ರಾಯ ಸಂಗ್ರಹ ಬೇಕಿಲ್ಲ
ಶಾಲೆಗಳ ಆರಂಭದ ವಿಚಾರದಲ್ಲಿ ಹೆತ್ತವರು, ಶಾಲಾಭಿವೃದ್ಧಿ ಸಮಿತಿಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹದಂತಹ ಕಾರ್ಯ ಕೈಬಿಡುವುದೇ ಒಳಿತು. ಮಕ್ಕಳ ಆರೋಗ್ಯ ದೃಷ್ಟಿಯಿಂದ ಸರಕಾರ ದೃಢ ನಿರ್ಧಾರ ಪ್ರಕಟಿಸಿದರೆ ಯಾವ ಹೆತ್ತವರು ತಾನೇ ಬೇಡ ಎನ್ನುತ್ತಾರೆ?

ಮಕ್ಕಳ ನಿಯಂತ್ರಣ ಸಾಧ್ಯವೇ?
ಸಣ್ಣ ಮಕ್ಕಳು ಒಂದೆಡೆಯೇ ಕುಳಿತಿರಬಲ್ಲರೇ? ಸಾಮಾಜಿಕ ಅಂತರ ಪಾಲನೆಯಂತಹ ನಿಯಮ ಪಾಲಿಸಲು ಅವರಿಂದ ಸಾಧ್ಯವೇ? ನನ್ನ ನಿಲುವು ಇಷ್ಟೇ – ಅನುಭವಿಗಳನ್ನು ಕರೆದು ಮಾರ್ಗದರ್ಶನ ಪಡೆಯಲಿ, ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ 10ನೇ ತರಗತಿಯವರೆಗೆ ಶಾಲೆಗಳ ಆರಂಭ ಇಲ್ಲ ಎಂಬ ದೃಢ ನಿಲುವನ್ನು ಸರಕಾರ ಸ್ಪಷ್ಟಪಡಿಸಲಿ.

ಸಾರಿಗೆ ವ್ಯವಸ್ಥೆ ಹೇಗೆ?
ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಆಡಳಿತ ಮಂಡಳಿಗಳು ಬಸ್‌, ವ್ಯಾನ್‌ ಇತ್ಯಾದಿ ವಾಹನ ವ್ಯವಸ್ಥೆ ಮಾಡಿರುತ್ತವೆ. ಹಲವರು ಆಟೋ ರಿಕ್ಷಾ, ವ್ಯಾನ್‌ಗಳಲ್ಲಿ ಕಳುಹಿಸಿಕೊಡುತ್ತಾರೆ. ಒಂದು ಆಟೋ ರಿಕ್ಷಾದಲ್ಲಿ 10-15 ಮಕ್ಕಳನ್ನು ಕರೆದೊಯ್ಯುತ್ತಾರೆ ಎನ್ನುವುದು ವಾಸ್ತವ. ಒಂದು ವೇಳೆ ಈ ವಾಹನಗಳ ಚಾಲಕರಿಗೋ ಶಾಲೆಯ ಆಯಾ ಗಳಿಗೋ ಸೋಂಕಿನ ಲಕ್ಷಣ ಕಂಡು ಬಂದರೆ, ಯಾವುದಾದರೂ ಒಂದು ಮಗು ಸೋಂಕು ಪೀಡಿತವಾದರೆ ಇಡೀ ಶಾಲೆಯ ಗತಿ ಏನು? ಇದನ್ನೆಲ್ಲ ಸರಕಾರ ಚಿಂತಿಸಿದೆಯೇ.

ಮಾರ್ಗೋಪಾಯ ಏನು?
ಸೆಪ್ಟಂಬರ್‌ನಿಂದ ಶಾಲೆ ಆರಂಭಿಸಿದರೂ ವಿಳಂಬ ಸರಿದೂಗಿಸಲು ಹಲವು ಮಾರ್ಗಗಳಿವೆ. ಅವುಗಳ ಬಗ್ಗೆ ಸರಕಾರ ಚಿಂತಿಸಲಿ.

– ತಿಂಗಳಲ್ಲಿ ಒಂದು ಶನಿವಾರ ಬಿಟ್ಟು ಉಳಿದ ಎಲ್ಲ ಶನಿವಾರ ಪೂರ್ಣ ಶಾಲೆ ನಡೆಯಲಿ

– ಜಯಂತಿಗಳ ರಜೆ, ಅಕ್ಟೋಬರ್‌ ರಜೆ ರದ್ದುಪಡಿಸಿ

– ಪಠ್ಯಗಳನ್ನು 20 ಚಾಪ್ಟರ್‌ ಬದಲು 10ಕ್ಕೆ ಇಳಿಸಿ

– ವಿಶೇಷ ತರಗತಿ ಆಯೋಜಿಸಿ

– ಶೈಕ್ಷಣಿಕ ವರ್ಷವನ್ನು ಮಾರ್ಚ್‌ – ಎಪ್ರಿಲ್‌ ಬದಲು ಮೇ ಮಧ್ಯದವರೆಗೆ ಮುಂದುವರಿಸಿ

ಎಸೆಸೆಲ್ಸಿ ಪರೀಕ್ಷೆ ಇರಲಿ
ಸದ್ಯದ ಸ್ಥಿತಿಯಲ್ಲಿ ಶಿಕ್ಷಕರು ಶಾಲೆಗೆ ಹೋಗಿ ಮಾಡುವುದೇನು ಎಂಬುದರ ಬಗ್ಗೆಯೂ ಸರಕಾರ ಚಿಂತಿಸಲಿ. ಆದರೆ ಎಸೆಸೆಲ್ಸಿ ಪರೀಕ್ಷೆ ಇಲ್ಲದೆ ಪಾಸು ಮಾಡುವ ಪದ್ಧತಿ ಸರಿಯಲ್ಲ.

– ಬಸವರಾಜ ಹೊರಟ್ಟಿ , ಮಾಜಿ ಶಿಕ್ಷಣ ಸಚಿವರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.