ಫೆ.22ರಿಂದ ಆರರಿಂದ ಎಂಟನೇ ತರಗತಿ ಶಾಲಾರಂಭ: ಸರ್ಕಾರದಿಂದ ಅಧಿಕೃತ ಆದೇಶ
Team Udayavani, Feb 19, 2021, 3:30 PM IST
Representative Image
ಬೆಂಗಳೂರು: ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಫೆ. 22, ಸೋಮವಾರ ಆರಂಭವಾಗಲಿವೆ. ಆದರೆ ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಸಹಿತ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಶಾಲೆಗಳಲ್ಲಿ ಅಂದಿನಿಂದ 8ನೇ ತರಗತಿಗೆ ಮಾತ್ರ ಶಾಲೆ, ಅದಕ್ಕಿಂತ ಕಿರಿಯರಿಗೆ ಎಂದಿನಂತೆ ವಿದ್ಯಾಗಮ ಮುಂದುವರಿಯಲಿದೆ. ಈ ಬಗ್ಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ಮಂಗಳವಾರ (ಫೆ.16) ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು.
6ರಿಂದ ದ್ವಿತೀಯ ಪಿಯುವರೆಗೆ ದಿನ ಪೂರ್ತಿ ತರಗತಿ ನಡೆಯಲಿದೆ. ಆರೋಗ್ಯ ಇಲಾಖೆ ಶಾಲೆಗೆ ಹಾಜರಾಗುತ್ತಿರುವ ಮಕ್ಕಳ ರ್ಯಾಡಮ್ ಕೋವಿಡ್ ಪರೀಕ್ಷೆ ನಡೆಸಲಿದೆ.
ಇದನ್ನೂ ಓದಿ:ಪಿಎಫ್ಐ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ
ಕೇರಳದಿಂದ ಗಡಿಯ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೆಗೆಟಿವ್ ಫಲಿತಾಂಶವಿದ್ದರೆ ಮಾತ್ರ ಶಾಲೆಗೆ ಹಾಜರಾಗಬೇಕು. 6ರಿಂದ 8ನೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕ ಅಥವಾ ಪೋಷಕರಿಂದ ಒಪ್ಪಿಗೆ ಪತ್ರ ತರುವುದು ಕಡ್ಡಾಯ. ತರಗತಿಗೆ ಹಾಜರಾಗಬೇಕು ಎಂಬ ಕಡ್ಡಾಯ ನಿಯಮವಿಲ್ಲ ಎಂದು ಸೂಚಿಸಲಾಗಿದೆ.
ಆರರಿಂದ ಎಂಟನೇ ತರಗತಿಯರೆಗೆ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸುವುದರಿಂದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಮನೆಯಿಂದಲೇ ತರುವಂತೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು