ಶಾಲಾರಂಭ : ಮತ್ತೆ ಗೊಂದಲ
Team Udayavani, Dec 23, 2020, 6:00 AM IST
ಬೆಂಗಳೂರು: ಕೋವಿಡ್ ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಜ. 1ರಿಂದ ಎಸೆಸೆಲ್ಸಿ ಮತ್ತು ಪಿಯು ತರಗತಿ ಆರಂಭಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿ ರಾಜ್ಯ ಸರಕಾರ ಮುಳುಗಿದೆ. ಕೋವಿಡ್ ತಾಂತ್ರಿಕ ಸಮಿತಿ ಈ ಸಂಬಂಧ ಶೀಘ್ರವೇ ಇನ್ನೊಂದು ಶಿಫಾರಸು ನೀಡಲಿದ್ದು, ಆದನ್ನು ಆಧರಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸದ್ಯ ಈಗಾಗಲೇ ಘೋಷಿಸಿರುವಂತೆ ಜ. 1ಕ್ಕೆ ಎಸೆಸೆಲ್ಸಿ ಹಾಗೂ ಪಿಯು ತರಗತಿಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಆದರೆ ಈ ನಡುವೆಯೇ ಸಲಹಾ ಸಮಿತಿಯು ಎರಡನೇ ಅಲೆ ಅಪಾಯ ಕುರಿತು ಎಚ್ಚರಿಸಿದೆ. ವೈರಸ್ ರೂಪಾಂತರದ ಆತಂಕವೂ ಇರು ವುದರಿಂದ ಶಾಲಾರಂಭದ ನಿರ್ಣಯ ವನ್ನು ಸರಕಾರ ಪುನರ್ ಪರಿಶೀಲಿಸಲಿದೆ ಎನ್ನಲಾಗಿದೆ.
ಇಂಗ್ಲೆಂಡ್ನಲ್ಲಿ ಪತ್ತೆಯಾಗಿರುವ ರೂಪಾಂತ ರಿತ ವೈರಾಣು ಹೆಚ್ಚು ವೇಗವಾಗಿ ಹರಡುತ್ತದೆ ಎನ್ನ ಲಾಗಿದೆ. ಹೀಗಾಗಿ ಶಾಲಾರಂಭದ ದಿನಾಂಕದ ಬಗ್ಗೆ ಇನ್ನೊಮ್ಮೆ ಸಮಿತಿ, ಸಿಎಂ ಜತೆಗೆ ಚರ್ಚಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್ ತಿಳಿಸಿದ್ದಾರೆ.
ನಡೆದಿದೆ ಸಿದ್ಧತೆ
ಈ ಮಧ್ಯೆ, ಜ. 1ರಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6ರಿಂದ 9ನೇ ತರಗತಿಗೆ ವಿದ್ಯಾಗಮ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಶಾಲಾರಂಭ ಇನ್ನಷ್ಟು ದಿನ ಮುಂದೂಡಿಕೆಯಾಗುವ ಸಾಧ್ಯತೆ ಇಲ್ಲದಿಲ್ಲ. ಆದರೆ ವಿದ್ಯಾಗಮ ಜ.1ರಿಂದ ಆರಂಭವಾಗಲಿದೆ. ಶಾಲಾರಂಭ ಮುಂದೂಡಲ್ಪಟ್ಟರೆ ಎಸೆಸೆಲ್ಸಿಗೂ ವಿದ್ಯಾಗಮ ನಡೆಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಫೆಬ್ರವರಿ ವರೆಗೆ ಸಿಬಿಎಸ್ಇ ಪರೀಕ್ಷೆ ಇಲ್ಲ
ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ)ಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿವರೆಗೆ ನಡೆಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಕೊರೊನಾ ಪರಿಸ್ಥಿತಿ ಆಧರಿಸಿ ಮತ್ತು ವಿಸ್ತೃತ ಸಮಾಲೋಚನೆಯ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಎಂದಿದ್ದಾರೆ.
ಮಕ್ಕಳ ಹಿತದೃಷ್ಟಿಯಿಂದ ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಶಾಲಾರಂಭವು ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ.
-ಸುರೇಶ್ ಕುಮಾರ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ