ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಶಾಲೆಗಳ ಹಿಂದೇಟು

ಸಮಗ್ರ ನಿರ್ದೇಶಕ, ಸಮಗ್ರ ಶಿಕ್ಷಣ ಅಭಿವೃದ್ಧಿ ಕಲ್ಪನೆ ಮರೆತ ಕರ್ನಾಟಕ ಪಬ್ಲಿಕ್‌ ಶಾಲೆಗಳು

Team Udayavani, Dec 4, 2019, 5:12 AM IST

rt-44

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಯಿಂದಲೇ “ಮಾಸ್ಟರ್‌ ಪ್ಲಾನ್‌’ ಸಿದ್ಧಪಡಿಸುವಂತೆ ಸರ್ಕಾರ ನಿರ್ದೇಶನ ನೀಡಿದ್ದರೂ ಬಹುತೇಕ ಕರ್ನಾಟಕ ಪಬ್ಲಿಕ್‌ ಶಾಲೆಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.!

ಸರ್ಕಾರಿ ವ್ಯವಸ್ಥೆಯಡಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೂ ಒಂದೇ ಸೂರಿನಡಿ ಉತ್ಕೃಷ್ಟವಾದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆಯ ಪರಿಕಲ್ಪನೆ ಆರಂಭಿಸಿ, ಅನುಷ್ಠಾನಗೊಳಿಸಿದೆ. ರಾಜ್ಯದಲ್ಲಿ 238 ಕರ್ನಾಟಕ ಪಬ್ಲಿಕ್‌ ಶಾಲೆಗಳಿದ್ದು, ಅವುಗಳ ಕಾರ್ಯವೈಖರಿ ಮತ್ತು ಶೈಕ್ಷಣಿಕ ಪ್ರಗತಿ ಹೇಗಿರಬೇಕು ಎಂಬುದರ ಸ್ಪಷ್ಟ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಈ ಹಿಂದೆಯೇ ಹೊರಡಿಸಿತ್ತು. ಪಬ್ಲಿಕ್‌ ಶಾಲೆಗೆ ಬೇಕಾದ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿ, ಅದರಂತೆ ಆಯಾ ಶಾಲೆಗಳಿಂದ ಮಾಸ್ಟರ್‌ ಪ್ಲಾನ್‌ ಸಿದ್ಧಮಾಡಿಕೊಡುವಂತೆಯೂ ನಿರ್ದೇಶನ ನೀಡಲಾಗಿತ್ತು. ಆದರೆ, ಬಹುತೇಕ ಶಾಲೆಗಳು ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸದಿರುವುದು ಇಲಾಖೆ ಗಮನಕ್ಕೆ ಬಂದಿದೆ. ರಾಜ್ಯದ 238 ಕರ್ನಾಟಕ ಪಬ್ಲಿಕ್‌ ಶಾಲೆಗಳು ತಮ್ಮ ಮಾಸ್ಟರ್‌ ಪ್ಲಾನ್‌ಗಳನ್ನು ಇಲಾಖೆಗೆ ಪ್ರಸ್ತುತಪಡಿಸಲು ನೋಂದಾಯಿಸಿಕೊಳ್ಳಲು ಇಲಾಖೆಯಿಂದ ಸೂಚನೆ
ನೀಡಲಾಗಿತ್ತು. ಅದರಂತೆ, 94 ಶಾಲೆಗಳು ಮಾಸ್ಟರ್‌ ಪ್ಲಾನ್‌ ಪ್ರಸ್ತುತಿಗೆ ನೋಂದಣಿ ಮಾಡಿಕೊಂಡಿದ್ದವು. ನೋಂದಣಿ ಮಾಡಿದ ಶಾಲೆಗಳಲ್ಲಿ 40 ಶಾಲೆಗೆ ಮಾಸ್ಟರ್‌ ಪ್ಲಾನ್‌ ಪ್ರಾತ್ಯಕ್ಷಿಕೆಗೆ ಅವಕಾಶ ನೀಡಲಾಗಿತ್ತು. ಉಳಿದ 54 ಶಾಲೆಗಳ ಮಾಸ್ಟರ್‌ ಪ್ಲಾನ್‌ ಪ್ರಗತಿಯನ್ನು ಕರ್ನಾಟಕ ಪಬ್ಲಿಕ್‌ ಶಾಲೆ ವೆಬ್‌ಪೋರ್ಟಲ್‌ನಲ್ಲಿ ಪರಿಶೀಲಿಸಿದ ಸಂದರ್ಭದಲ್ಲಿ ಕೆಲವು ಶಾಲೆಗಳು ಶೂನ್ಯ ಪ್ರಗತಿ ಹಾಗೂ 14 ಶಾಲೆಗಳು ಶೇ.30ಕ್ಕಿಂತ ಕಡಿಮೆ ಪ್ರಗತಿಯನ್ನು ಹೊಂದಿರುವುದು ಇಲಾಖೆಗೆ ತಿಳಿದು ಬಂದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಏನಿದು ಮಾಸ್ಟರ್‌ ಪ್ಲಾನ್‌?: ಒಂದರಿಂದ 12ನೇ ತರಗತಿ ವರೆಗೂ ಸರ್ಕಾರಿ ವ್ಯವಸ್ಥೆಯ ಶಾಲಾ ಶಿಕ್ಷಣ ಒಂದೇ ಸೂರಿನಡಿ ಇರುವುದರಿಂದ ಅತ್ಯಂತ ಉತ್ಕೃಷ್ಟ ಶಿಕ್ಷಣದ ಜತೆಗೆ ಆಧುನಿಕತೆಗೆ ಪೂರಕವಾದ ವ್ಯವಸ್ಥೆಗೆ ಅಗತ್ಯ ಅಂಶವಿರುವ ಪ್ಲಾನ್‌ ಸಿದ್ಧಪಡಿಸಬೇಕು ಎಂಬುದನ್ನು ಇಲಾಖೆಯಿಂದ ಕರ್ನಾಟಕ ಪಬ್ಲಿಕ್‌ ಶಾಲೆಗೆ ಸೂಚಿಸಲಾಗಿತ್ತು. ಶಾಲೆಯ ಸಂಪೂರ್ಣ ಮಾಹಿತಿಯ ಜತೆಗೆ ನಾಯಕತ್ವ ಗುರುತಿಸಿ ಬೆಳೆಸಲು ತೆಗೆದುಕೊಳ್ಳಬಹುದಾದ ಕ್ರಮ, ಶಾಲಾ ಶಿಕ್ಷಣ ವ್ಯವಸ್ಥೆ ಗಟ್ಟಿಗೊಳಿಸಲು ಪಾಲುದಾರರೊಂದಿಗೆ (ಸ್ಟೇಕ್‌ ಹೋಲ್ಡರ್) ಹೊಂದಿರುವ ಸಮನ್ವಯತೆ, ಅನುದಾನದ ಸದುಪಯೋಗ, ಸರ್ಕಾರೇತರ ಮೂಲಗಳಿಂದ ಬರುವ ತಾಂತ್ರಿಕ, ಆರ್ಥಿಕ ಮತ್ತು ಮಾನವ ಸಂಪನ್ಮೂಲಗಳ ಸದುಪಯೋಗ, ಶೈಕ್ಷಣಿಕೇತರ ಚಟುವಟಿಕೆಗೆ ಉತ್ತೇಜನ ನೀಡಲು ಬೇಕಾದ ಕಾರ್ಯಯೋಜನೆ, ಶಾಲೆಯನ್ನು ಸುಸ್ಥಿರ ಹಾಗೂ
ಪರಿಸರ ಸ್ನೇಹಿಯಾಗಿ ಉಳಿಸಿಕೊಳ್ಳುವ ಬಗ್ಗೆ ರೂಪಿಸಿರುವ ಕಾರ್ಯ ಕ್ರಮಗಳನ್ನು ಒಳಗೊಂಡ ಮಾಸ್ಟರ್‌ ಪ್ಲಾನ್‌ ಶಾಲೆಯಿಂದ ಸರ್ಕಾರಕ್ಕೆ ನೀಡಬೇಕಿತ್ತು. ಆದರೆ, ಬಹುತೇಕ ಶಾಲೆಗಳು ಇದನ್ನು ಮಾಡಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.

ಈಗಾಗಲೇ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿರುವ ಬಹುತೇಕ ಶಾಲೆಗಳಲ್ಲಿ ಶೈಕ್ಷಣಿಕ ವಿಷಯವೊಂದನ್ನೇ ಗಮನದಲ್ಲಿಟ್ಟುಕೊಂಡು ಮಾಸ್ಟರ್‌ ಪ್ಲಾನ್‌ ನೀಡಲಾಗಿದೆ. ಶೈಕ್ಷಣಿಕೇತರವಾಗಿರುವ ವಿದ್ಯಾರ್ಥಿ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಿರುವ ಅನೇಕ ಅಂಶಗಳ ಬಗ್ಗೆ ಶಾಲೆಗಳು ಹೆಚ್ಚಿನ ಗಮನ ಹರಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿರುವ ಶಾಲೆಗಳ ಸಂಖ್ಯೆ ಅತಿ ಕಡಿಮೆಯಿದೆ. ಮಾಸ್ಟರ್‌ ಪ್ಲಾನ್‌ ಹೇಗಿರಬೇಕು ಮತ್ತು ಕರ್ನಾಟಕ ಪಬ್ಲಿಕ್‌ ಶಾಲೆಗೆ ಯಾವ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂಬ ತರಬೇತಿಯನ್ನು ಶಿಕ್ಷಕರಿಗೆ ನೀಡಲಾಗಿದೆ. ಆದರೂ, ಸರ್ಕಾರದ ನಿರೀಕ್ಷೆಯಂತೆ ಕರ್ನಾಟಕ ಪಬ್ಲಿಕ್‌ ಶಾಲೆಗಳು ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿದ್ಧಪಡಿಸದಿರಲು ಕಾರಣ
ಕರ್ನಾಟಕ ಪಬ್ಲಿಕ್‌ ಶಾಲಾ ವ್ಯವಸ್ಥೆಯನ್ನು ನಿಯಂತ್ರಿಸಲು ವೆಬ್‌ಪೋರ್ಟಲ್‌ ಸಿದ್ಧಪಡಿಸಲಾಗಿದೆ. ಶಾಲೆಗಳು ತಮ್ಮ ಮಾಸ್ಟರ್‌ ಪ್ಲಾನ್‌ ಅನ್ನು ವೆಬ್‌ಪೋರ್ಟಲ್‌ ಮೂಲಕ ಅಪ್‌ ಲೋಡ್‌ ಮಾಡಬೇಕು. ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಕರ ಕೊರತೆ, ತರಬೇತಿ ಪಡೆದಿರುವ ಶಿಕ್ಷಕರು ಇಲ್ಲದಿರುವುದು, ತಾಂತ್ರಿಕವಾಗಿ ಬೇಕಿರುವ ಸೌಲಭ್ಯ ದೊರೆಯದೇ ಇರುವುದು ಸೇರಿದಂತೆ ಅನೇಕ ಕಾರಣಕ್ಕೆ ಮಾಸ್ಟರ್‌ ಪ್ಲಾನ್‌ ಸಿದ್ಧವಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಎಲ್ಲ ಕರ್ನಾಟಕ ಪಬ್ಲಿಕ್‌ ಶಾಲೆಗಳು ಮಾಸ್ಟರ್‌ ಪ್ಲಾನ್‌ ನೀಡಬೇಕು. ಆದರೆ, ಅನೇಕ ಶಾಲೆಗಳು ನೀಡಿಲ್ಲ. ಈಗಾಗಲೇ ನೀಡಿರುವ ಶಾಲೆಗಳು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿವೆ. ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸುವ ಬಗ್ಗೆ ತರಬೇತಿಯನ್ನು ನೀಡಿದ್ದೇವೆ.
– ಡಾ.ಟಿ.ಎಂ.ರೇಜು, ರಾಜ್ಯ ಯೋಜನಾ ಸಮಗ್ರ ನಿರ್ದೇಶಕ, ಸಮಗ್ರ ಶಿಕ್ಷಣ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.