ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ


Team Udayavani, Mar 30, 2023, 5:05 AM IST

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಬೆಂಗಳೂರು: ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ಲಿಂಗಾಯತ ಸಮುದಾಯವನ್ನು ಒಡೆಯಲು ಮುಂದಾಗಿದ್ದರು. ಆದರೆ ನಮ್ಮ ಸರ್ಕಾರ ಆ ಸಮುದಾಯಕ್ಕೆ ಶೇ.7 ಮೀಸಲು ಸೌಲಭ್ಯ ಕಲ್ಪಿಸಿದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮೀಸಲಾತಿಯ ವೈಜ್ಞಾನಿಕ ಹಂಚಿಕೆಗೆ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸರ್ಕಾರ ಲಿಂಗಾಯತರಿಗೆ ಶೇ.7 ಮೀಸಲಾತಿ ಕೊಟ್ಟಿದ್ದು, ಆ ಸಮಾಜ ಖುಷಿಯಿಂದಿದೆ. ಒಕ್ಕಲಿಗರಿಗೆ ಶೇ.6 ಮೀಸಲಾತಿ ನೀಡಿದೆ. ಬಿಜೆಪಿ ಸ್ವಂತ ಬಲದಲ್ಲಿ, ಬಹುಮತ ಪಡೆದು ಸರಕಾರ ರಚಿಸಲಿದೆ. ಲಕ್ಷಾಂತರ ಕಾರ್ಯಕರ್ತರ ಆಸೆ- ಅಭಿಲಾಷೆಯ ಪ್ರಾತಿನಿಧ್ಯದ ರೂಪದಲ್ಲಿ ಬಹುಮತ ಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ನೀಡಿದ ಶೇ. 4 ಮೀಸಲಾತಿಯನ್ನು ಶೇ.2 ಲಿಂಗಾಯತರಿಗೆ, ಶೇ. 2 ಒಕ್ಕಲಿಗರಿಗೆ ಕೊಡುವ ಕೆಲಸವನ್ನು ಬಿಜೆಪಿ ಮಾಡಿದೆ. ಸಂವಿಧಾನದತ್ತವಾಗಿ ಅಲ್ಪಸಂಖ್ಯಾತರಿಗೆ ಕೊಡಬೇಕಾದ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಶೇ.10 ಇಡಬ್ಲ್ಯುಎಸ್‌ ಅಡಿಯಲ್ಲಿ ಅವರಿಗೂ ಮೀಸಲಾತಿ ಕೊಡುತ್ತಿದ್ದೇವೆ ಎಂದರು.

ಪ್ರತಿ 10 ವರ್ಷಕ್ಕೆ ಒಮ್ಮೆಯಾದರೂ ಮೀಸಲಾತಿ ಪ್ರಗತಿ ಪರಿಶೀಲನೆ ಆಗಬೇಕೆಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರೇ ಹೇಳಿದ್ದರು. ಆದರೆ, 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್‌ ರಾಜ್ಯ- ಕೇಂದ್ರದಲ್ಲಿ ಈ ಕೆಲಸ ಮಾಡಿರಲಿಲ್ಲ. ಪ್ರಗತಿಯ ದಾರಿ, ವಿಶ್ಲೇಷಣೆ, ಚರ್ಚೆ ಮಾಡಲೇ ಇಲ್ಲ. ಇದು ಈ ದೇಶದ ಎಸ್ಸಿ, ಎಸ್ಟಿ, ಒಬಿಸಿ, ಸಾಮಾನ್ಯ ಜನರ ದುರಂತ. ಬೊಮ್ಮಾಯಿಯವರು ಅದೆಲ್ಲವನ್ನೂ ವಿಶ್ಲೇಷಣೆ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಬೊಮ್ಮಾಯಿಯವರು ಜೇನುಹುಟ್ಟಿಗೂ ಕೈ ಹಾಕಿ ಅದರ ಸಿಹಿಯನ್ನು (ಜೇನು) ಸಮಾಜಕ್ಕೆ ಕೊಟ್ಟಿದ್ದಾರೆ. ಎಸ್ಸಿ, ಎಸ್ಟಿ, ಒಕ್ಕಲಿಗರು, ಒಬಿಸಿಯವರಿಗೆ ಅನುಕೂಲ ಕೊಡುವುದರಲ್ಲಿ ನಾವು ಕಾಂಗ್ರೆಸ್‌ಗಿಂತ ಮುಂದಿದ್ದೇವೆ. ಎಸ್ಸಿ, ಎಸ್ಟಿ, ಒಬಿಸಿಗಳ ಪಾರ್ಟಿ ಎನ್ನುವ ಕಾಂಗ್ರೆಸ್ನವರು ಇದನ್ನು ಯಾಕೆ ಮಾಡಿಲ್ಲ ? ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರೋಧಿಗಳು ಎನ್ನುತ್ತಿದ್ದ ಸಿದ್ದರಾಮಯ್ಯರವರು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

ಬಂಜಾರ-ಲಂಬಾಣಿ ಸಮುದಾಯದ ಹೋರಾಟ ನಡೆಯುತ್ತಿಲ್ಲ. ಆ ಸಮುದಾಯದ ಕೆಲವು ಕಾಂಗ್ರೆಸ್‌ ನಾಯಕರ ಪಿತೂರಿಯಿಂದ ರಾಜ್ಯದ ವಿವಿಧೆಡೆ ಗಲಭೆ ನಡೆದಿದೆ. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತಕ್ಕೆ ಅಲ್ಲಿನ ಕಾಂಗ್ರೆಸ್ಸಿನ ಯುವ ನಾಯಕ ಕಾರಣ. ಅವರು ಏನು ಮೀಟಿಂಗ್‌ ಮಾಡಿದರು ? ಯೋಜನೆ ಏನಾಗಿತ್ತು ? ಎಂಬುದು ಜಗಜ್ಜಾಹೀರಾಗಿದೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.