ಹಿಮಾಲಯದಲ್ಲಿ 8.5ರಷ್ಟು ತೀವ್ರತೆಯ ಭೂಕಂಪ ಸಂಭವ;ಬೆಚ್ಚಿ ಬೀಳಿಸೋ ವಿವರ


Team Udayavani, Dec 1, 2018, 12:39 PM IST

himalya-new.jpg

ಬೆಂಗಳೂರು: ಹಿಮಾಲಯದಲ್ಲಿ ಪ್ರಬಲ ಭೂಕಂಪ ಸಂಭವಿಸಬಹುದು ಎಂದು ಈಗಾಗಲೇ ಹಲವು ಸಂಶೋಧನಾ ವರದಿ ಎಚ್ಚರಿಕೆ ನೀಡಿದ್ದು, ಇದೀಗ ಭಾರತೀಯ ಸಂಶೋಧಕರು ಕೂಡಾ ಹಿಮಾಲಯದಲ್ಲಿ ಭಾರೀ ಭೂಕಂಪ ಸಂಭವಿಸುವ ಸಾಧ್ಯತೆ ಕುರಿತು ಅಧ್ಯಯನ ನಡೆಸಿದ್ದಾರೆ.

ಬೆಂಗಳೂರಿನ ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್ ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್ ನ ಭೂಕಂಪ ಅಧ್ಯಯನ ವಿಜ್ಞಾನಿ ಸಿಪಿ ರಾಜೇಂದ್ರನ್ ಅವರ ನೂತನ ಅಧ್ಯಯನದ ಪ್ರಕಾರ, ಮಧ್ಯ ಹಿಮಾಲಯ ಭಾಗದಲ್ಲಿ ಭವಿಷ್ಯದಲ್ಲಿ ಯಾವ ಸಂದರ್ಭದಲ್ಲಿಯೂ ಕನಿಷ್ಠ ಒಂದಾದರು ಬೃಹತ್ ಪ್ರಮಾಣದ (8.5ರಷ್ಟು ತೀವ್ರತೆ) ಭೂಕಂಪ ಸಂಭವಿಸಲಿದೆ ಎಂದು ತಿಳಿಸಿದ್ದಾರೆ.

ಜಿಯೋಲಾಜಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ಸಂಶೋಧಕರು ನೂತನವಾಗಿ ಸಂಶೋಧಿಸಿದ ಎರಡು ಸ್ಥಳಗಳಾದ ಪಶ್ಚಿಮ ನೇಪಾಳದ ಮೋಹನಾ ಖೋಲಾ ಮತ್ತು ಭಾರತದ ಗಡಿರೇಖೆಯಲ್ಲಿರುವ ಛೋರ್ಗಾಲಿಯಾ ದತ್ತಾಂಶಗಳನ್ನು ಈಗಿರುವ ದತ್ತಾಂಶದ ಜೊತೆಗೆ ಹೋಲಿಕೆ ಮಾಡಿ ವಿಮರ್ಶಿಸಿದ್ದಾರೆ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲ ಸಂಶೋಧಕರು ಸ್ಥಳೀಯ ಭೂವಿಜ್ಞಾನ ಮತ್ತು ಭಾರತೀಯ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಪ್ರಕಟಿಸಿರುವ ವಿಶೇಷ ಭೂಪಟದ ಮಾಹಿತಿಯನ್ನು ಬಳಸಿಕೊಂಡಿದ್ದಾರೆ. ಜೊತೆಗೆ ಗೂಗಲ್ ಅರ್ಥ್ ಮತ್ತು ಇಸ್ರೋದ ಕಾರ್ಟೊಸ್ಯಾಟ್ 1 ಸೆಟಲೈಟ್ನ ಚಿತ್ರವನ್ನು ಅಧ್ಯಯನಕ್ಕೆ ಬಳಸಿಕೊಂಡಿದೆ.

ಸಂಶೋಧಕರ ಪ್ರಕಾರ, ಮಧ್ಯ ಹಿಮಾಲಯದಲ್ಲಿ 1315 ಮತ್ತು 1440ರ ನಡುವೆ 8.5ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ತೀವ್ರತೆಯ ಭೂಕಂಪ ಸಂಭವಿಸಿತ್ತು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೂತನ ಅಧ್ಯಯನದ ಪ್ರಕಾರ,  ಭಾರೀ ಭೂಕಂಪ ಸಂಭವಿಸಿ ಇದೀಗ 600, 700 ವರ್ಷಗಳೇ ಕಳೆದಿದೆ. ಹೀಗಾಗಿ ಮಧ್ಯ ಹಿಮಾಲಯದಲ್ಲಿ ಭೂಕಂಪ ಹಾಗೆಯೇ ಉಳಿದುಕೊಂಡಿದೆ.

ಈ ಭಾಗದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಪರಿಸರದಲ್ಲಿ ಹೆಚ್ಚುತ್ತಿರುವ ಕಟ್ಟಡಗಳ ನಿರ್ಮಾಣವಾಗುತ್ತಿದ್ದು, ಮಧ್ಯ ಹಿಮಾಲಯ ಭಾಗದಲ್ಲಿ ತೀವ್ರ ತರದ ಭೂಕಂಪ ಸಂಭವಿಸಿದರೆ ಅದರ ಅಪಾಯ ದೊಡ್ಡ ಮಟ್ಟದ್ದಾಗಿರುತ್ತದೆ. ನಾವು ಅದನ್ನು ಎದುರಿಸಲು ಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆಯೂ ಹೆಚ್ಚು ಮುತುವರ್ಜಿ ವಹಿಸಿಲ್ಲ ಎಂದು ರಾಜೇಂದ್ರನ್ ಅವರು ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.