Dr.Hiremath Foundation; ಶಿಲ್ಪಿ ಅರುಣ್ ಯೋಗಿರಾಜ್ ಗೆ ‘ಅಭಿನವ ಅಮರ ಶಿಲ್ಪಿ’ ಬಿರುದು
Team Udayavani, Feb 22, 2024, 4:57 PM IST
ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನೆಗೊಂಡಿರುವ ಬಾಲರಾಮನ ಮೂರ್ತಿಯನ್ನು ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಡಾ. ಹಿರೇಮಠ ಫೌಂಡೇಶನ್ ಹಾಗೂ ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆ ಸಹಯೋಗದಲ್ಲಿ “ಅಭಿನವ ಅಮರ ಶಿಲ್ಪಿ” ಬಿರುದು ಪ್ರದಾನಿಸಲು ತೀರ್ಮಾನಿಸಲಾಗಿದೆ.
ಮಾರ್ಚ್ 4ರಂದು ಕಾರವಾರ ನಗರದ ಸಾಗರ್ ಕನ್ವೆನ್ಷನ್ ಹಾಲ್ನಲ್ಲಿ ನಡೆಯವ ಕಾರ್ಯಕ್ರಮದಲ್ಲಿ ಬಿರುದು ನೀಡಿ ಗೌರವಿಸಲಾಗುವುದು ಎಂದು ಡಾ. ಹಿರೇಮಠ ಫೌಂಡೇಶನ್ನ ಸಂಸ್ಥಾಪಕ ಡಾ. ವಿಶ್ವನಾಥ ಹಿರೇಮಠ ಅವರು ಗುರುವಾರ (ಫೆಬ್ರವರಿ 22) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ರಾಮ ಮಂದಿರ ಭಾರತೀಯರ 500 ವರ್ಷಗಳ ಕನಸು. ಲಕ್ಷಾಂತರ ಕರಸೇವಕರ ಪರಿಶ್ರಮದ ಸಲುವಾಗಿ ಇಂದು ರಾಮ ಮಂದಿರ ಅಯೋಧ್ಯೆಯಲ್ಲಿ ತಲೆ ಎತ್ತಿ ನಿಂತಿದೆ. ರಾಮ ಮಂದಿರದಲ್ಲಿರುವ ಸುಂದರ ರಾಮಲಲ್ಲಾ ಮೂರ್ತಿಯ ಕೆತ್ತನೆ ಮಾಡಿರುವುದು ನಮ್ಮ ಕರ್ನಾಟಕದ ಮೈಸೂರಿನವರೇ ಆದ ಅರುಣ್ ಯೋಗಿರಾಜ್ ಅವರೆಂಬುದು ಕನ್ನಡಿಗರಾದ ನಮ್ಮೆಲ್ಲರಿಗೂ ಹೆಮ್ಮೆ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸ್ವಾಗತಿಸಿ ಸನ್ಮಾನಿಸಬೇಕೆಂಬುದು ನಮ್ಮ ಬಯಕೆಯಾಗಿದೆ” ಎಂದು ಡಾ. ವಿಶ್ವನಾಥ್ ಹಿರೇಮಠ ಹೇಳಿದರು.
“ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಈ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆಯ ಅಧ್ಯಕ್ಷ ಡಾ. ಗಜೇಂದ್ರ ನಾಯಕ್ ಅವರಲ್ಲದೆ ಹಲವು ಹಿಂದೂ ಮುಖಂಡರು ಈ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ,” ಎಂದು ಅವರು ವಿವರಿಸಿದರು.
“ಡಾ. ಹಿರೇಮಠ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ಸನಾತನ ಧರ್ಮ ರಕ್ಷಣಾ ವೇದಿಕೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ 200ಕ್ಕೂ ಹೆಚ್ಚಿನ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರಿಗೆ, ಅವರ ನಿಸ್ವಾರ್ಥ ಸೇವೆಗಾಗಿ ಅಭಿನಂದನಾ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ,” ಎಂದು ಡಾ. ವಿಶ್ವನಾಥ ಹಿರೇಮಠ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಹಿರೇಮಠ ಫೌಂಡೇಷನ್ನ ಪ್ರಧಾನ ಕಾರ್ಯದರ್ಶಿ ಚೇತನ್, ಕಾರ್ಯದರ್ಶಿ ಲಕ್ಷ್ಮೀಶ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’