ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ


Team Udayavani, Mar 4, 2020, 3:06 AM IST

indini-da

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ (2019- 20) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬುಧವಾರ ಇತಿಹಾಸ, ಭೌತಶಾಸ್ತ್ರ ಹಾಗೂ ಮೂಲಗಣಿತ ವಿಷಯಗಳೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವ ರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮುನ್ನೆಚ್ಚರಿಕೆ ಮತ್ತು ಭದ್ರತಾ ಕ್ರಮ ತೆಗೆದುಕೊಂಡಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರ, ನೀಲಿ ಅಥವಾ ಕಪ್ಪು ಬಣ್ಣದ ಪೆನ್‌, ಸ್ಕೇಲ್‌, ಪೆನ್ಸಿಲ್‌, ಸಿಂಪಲ್‌ ಕ್ಯಾಲ್ಕುಲೇಟರ್‌, ಮುಳ್ಳು ಮಾತ್ರ ಹೊಂದಿರುವ ಸಾಮಾನ್ಯ ಕೈಗಡಿಯಾರ, ಟ್ರಾನ್ಸ್‌ಪರೆಂಟ್‌ ವಾಟರ್‌ ಬಾಟಲ್‌, ಔಷಧ, ಕನ್ನಡ ಮತ್ತು ಬಸ್‌ ಪಾಸ್‌ ಮರೆಯದೆ ತೆಗೆದುಕೊಂಡು ಹೋಗ ಬೇಕು. ಇದನ್ನು ಹೊರತುಪಡಿಸಿ, ಅಗತ್ಯವಿಲ್ಲದ ಯಾವುದೇ ವಸ್ತು ಕೊಂಡೊ ಯ್ಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿ ಗಳು, ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ. ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದಿಂದ ಮನೆಗೆ ಮತ್ತು ಮನೆ ಯಿಂದ ಪರೀಕ್ಷಾ ಕೇಂದ್ರಕ್ಕೆ ಶುಲ್ಕ ರಹಿತ ಪ್ರಯಾಣಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡ ಲಾಗಿದೆ ಎಂದು ಈ ಹಿಂದೆಯೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಸಿಟಿ ಆದೇಶ ಹೊರಡಿಸಿದೆ.

ಸಚಿವರ ಅಭಯ
ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಮ್ಮ ಫೇಸ್‌ಬುಕ್‌ ಖಾತೆ ಮೂಲಕ ಅಭಯ ಹಾಗೂ ನೈತಿಕ ಬಲ ತುಂಬಿದ್ದಾರೆ. ಈ ಮೂಲಕ ಪರೀಕ್ಷಾ ಭದ್ರತಾ ಕ್ರಮ ಮತ್ತು ಸರ್ಕಾರದಿಂದ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮದ ಕುರಿತು ಮಕ್ಕಳ, ಪಾಲಕ ಪೋಷಕರ ಗಮನಕ್ಕೆ ತಂದಿದ್ದಾರೆ.

“ಪಿಯುಸಿ ಪರೀಕ್ಷೆ ಬುಧವಾರ ಆರಂಭಗೊಳ್ಳಲಿದ್ದು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸದ್ಯದಲ್ಲೇ ಆರಂಭಗೊಳ್ಳಲಿವೆ. ಈ ಎರಡೂ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಅತಿ ಪ್ರಮುಖ ಘಟ್ಟ. ಹೀಗಾಗಿ ಉತ್ತಮ ಅಂಕಗಳಿಂದ ಉತ್ತೀರ್ಣರಾಗಬೇಕೆಂಬ ಮಹದಾಸೆ ಹೊಂದಿದ್ದೀರಿ. ಸರ್ಕಾರವೂ ನಿಮ್ಮೆಲ್ಲರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳು ಸುಲಲಿತವಾಗಿ ನಡೆಯಲು ಕ್ರಮ ಕೈಗೊಂಡಿದೆ’ ಎಂದು ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ.

ವಿದ್ಯಾರ್ಥಿಗಳೇ ಗಮನಿಸಿ..: ಬೆಳಗ್ಗೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೊರಡುವ ಮುನ್ನ ಪ್ರವೇಶ ಪತ್ರ, ಪೆನ್‌, ಸ್ಕೇಲ್‌, ಸಾಮಾನ್ಯ ಕ್ಯಾಲ್ಕುಲೇಟರ್‌, ಸಾಮಾನ್ಯ ಕೈಗಡಿಯಾರ, ಔಷಧ, ಕನ್ನಡ ಇತ್ಯಾದಿ ಮರೆಯದೇ ಕೊಂಡೊಯ್ಯಬೇಕು. ಪ್ರವೇಶ ಪತ್ರ ಇಲ್ಲದೇ ಪರೀಕ್ಷಾ ಕೇಂದ್ರ ಒಳಗೆ ಪ್ರವೇಶವಿಲ್ಲ. ಗೊಂದಲ ಮಾಡಿಕೊಳ್ಳದೇ ಪ್ರವೇಶ ಪತ್ರ ಮತ್ತು ಇತರೆ ಅಗತ್ಯ ವಸ್ತು ತಮ್ಮ ಬಳಿಯೇ ಇರುವುದನ್ನು ಖಚಿತಪಡಿಸಿಕೊಂಡೇ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೊರಡಬೇಕು. ಅಲ್ಲದೆ, ಪಾಲಕ, ಪೋಷಕರೂ ಮಕ್ಕಳು ಮನೆಯಿಂದ ಪರೀಕ್ಷೆಗೆ ಹೊರಡುವಾಗ ಅಂತಿಮ ಹಂತದ ಪರಿಶೀಲನೆ ನಡೆಸುವುದು ಉತ್ತಮ ಎಂದು ತಿಳಿಸಲಾಗಿದೆ.

ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗಲಿ. ಭವಿಷ್ಯ ಉಜ್ವಲವಾಗಲಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ನಾಡಿನ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ಪರೀಕ್ಷಾ ಯಶಸ್ಸು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೆಟ್ಟಿಲಾಗಲಿದೆ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.