ಕೈ’ ಕೊಟ್ಟ ಶಾಸಕ ಜಾಧವ ಮನೆಗೆ ಬಿಗಿ ಭದ್ರತೆ
Team Udayavani, Jan 19, 2019, 12:55 AM IST
ಚಿಂಚೋಳಿ: ಮೀಸಲು ವಿಧಾನಸಭಾ ಮತಕ್ಷೇತ್ರದ ಶಾಸಕ ಡಾ| ಉಮೇಶ ಜಾಧವ ಅವರು ಶಾಸಕಾಂಗ ಸಭೆಗೆಅ ನಾರೋಗ್ಯದ ಹಿನ್ನೆಲೆಯಲ್ಲಿ ಗೈರಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಪಟ್ಟಣದ ಚಂದಾಪುರ ನಗರದಲ್ಲಿರುವ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಸಕರು ಹಾಜರಾಗಬೇಕಿತ್ತು. ಅನಾರೋಗ್ಯದ ನೆಪ ಹೇಳಿ, ಫ್ಯಾಕ್ಸ್ ಮೂಲಕ ತಿಳಿಸಿ, ಸಭೆಗೆ ಗೈರು ಆಗಿದ್ದರು. ಹೀಗಾಗಿ, ಶಾಸಕ ಡಾ.ಉಮೇಶ ಜಾಧವ ಅವರು ಬಿಜೆಪಿ ತೆಕ್ಕೆಗೆ ಜಾರಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ದಿನದ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ಬಿಜೆಪಿ ಕುದುರೆ ವ್ಯಾಪಾರಕ್ಕೆ 50 ಕೋಟಿ ರೂ.ಗೆ ಮಾರಾಟ ಆಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿನ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಮುಂಬೈನಿಂದ ಹೈದ್ರಾಬಾದ್ಗೆ ವಿಮಾನದ ಮೂಲಕ ಆಗಮಿಸಿ, ಗಡಿಗ್ರಾಮ ಕುಂಚಾವರಂ ನಲ್ಲಿ ವಾಸ್ತವ್ಯ ಹೂಡಿ ಕಾರ್ಯಕರ್ತರೊಂದಿಗೆ ಬಿಜೆಪಿಗೆ ಸೇರ್ಪಡೆ ಕುರಿತು ಸಭೆ ನಡೆಸುವವರಿದ್ದರು. ಕಲಬುರಗಿಯಲ್ಲಿ ಪ್ರತಿಭಟನೆ ಸುದ್ದಿ ಕೇಳಿ ಪುನ: ಮುಂಬೈಗೆ ತೆರಳಿದ್ದರು. ಹೀಗಾಗಿ, ಚಂದಾಪುರ ನಿವಾಸಕ್ಕೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನೀಲಕುಮಾರ ಜಮಾದಾರ “ಉದಯವಾಣಿ’ ಜತೆ ಮಾತನಾಡಿ, ನಮ್ಮ ಶಾಸಕರು ಎಲ್ಲಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲ. ನಮಗೆ ಪಕ್ಷ ಮುಖ್ಯ, ಶಾಸಕರಲ್ಲ. ಪಕ್ಷ ಸೂಚಿಸಿದಂತೆ ನಾವು ಕೆಲಸ ಮಾಡುತ್ತೇವೆ. ಶಾಸಕರು ಎಲ್ಲಿದ್ದಾರೆ ಎಂದು ನನ್ನನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ