ದಸರಾ ಜತೆಗೆ ಪ್ರಕೃತಿ ಸೊಬಗನ್ನೂ ನೋಡಬನ್ನಿ


Team Udayavani, Sep 23, 2017, 10:27 AM IST

23-STATE-16.jpg

ಮೈಸೂರು: ದಸರಾ ಮಹೋತ್ಸವದ ಸಂಭ್ರಮ ಸವಿಯಲು ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ “ದಸರಾ ದರ್ಶನ 
ವ್ಯವಸ್ಥೆ’ ಆಯೋಜಿಸಲಾಗಿದ್ದು, ಶುಕ್ರವಾರ ಚಾಲನೆ ನೀಡಲಾಯಿತು.

ದಸರಾ ಉಪ ಸಮಿತಿಯಿಂದ ಸೆ.26ರಿಂದ 30ರವರೆಗೆ ಆಯೋಜಿಸಿರುವ ದಸರಾ ದರ್ಶನ ಕಾರ್ಯಕ್ರಮಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಾರಿಗೆ ಎಚ್‌.ಎಂ.ರೇವಣ್ಣ ಚಾಲನೆ ನೀಡಿದರು. ಶಾಸಕ ಎಂ.ಕೆ. ಸೋಮಶೇಖರ್‌, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಾಸು ಮತ್ತಿತರರು ಈ ವೇಳೆ ಹಾಜರಿದ್ದರು. 

ಆರ್ಥಿಕವಾಗಿ ಹಿಂದುಳಿದ ಅಥವಾ ಈವರೆಗೂ ದಸರಾ ಸಂಭ್ರಮವನ್ನು ನೋಡದವರಿಗೆ ದಸರಾ ಕಾರ್ಯಕ್ರಮಗಳನ್ನು ನೋಡುವ ಅವಕಾಶ ಕಲ್ಪಿಸುವುದು ದಸರಾ ದರ್ಶನದ ಮುಖ್ಯ ಉದ್ದೇಶ. ಇದಕ್ಕಾಗಿ ಮೈಸೂರು ಕೊಡಗು, ಮಂಡ್ಯ, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳ 174 ಫ‌ಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ದಸರಾ ದರ್ಶಿನಿ ಪ್ಯಾಕೇಜ್‌ನಲ್ಲಿ ಚಾಮುಂಡಿ ಬೆಟ್ಟ, ಮೃಗಾಲಯ, ಅರಮನೆ, ರೈತ ದಸರಾ ಕಾರ್ಯಕ್ರಮಗಳಿಗೆ ಭೇಟಿ, ಜಲದರ್ಶಿನಿ ಪ್ಯಾಕೇಜ್‌ ಅಡಿಯಲ್ಲಿ ಗೋಲ್ಡನ್‌ ಟೆಂಪಲ್‌, ದುಬಾರೆ, ನಿಸರ್ಗಧಾಮ, ಅಬ್ಬಿಫಾಲ್ಸ್‌ ರಾಜಾಸ್ಟ್ರೀಟ್‌, ಹಾರಂಗಿ ಮತ್ತು ಕೆಆರ್‌ಎಸ್‌ ಜಲಾಶಯಗಳ ದರ್ಶನ ಮಾಡಿಸಲಾಗುವುದು. ಗಿರಿದರ್ಶಿನಿ ಪ್ಯಾಕೇಜ್‌ನಲ್ಲಿ ಬಂಡಿಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟ, ನಂಜನಗೂಡು, ಚಾಮುಂಡಿಬೆಟ್ಟವನ್ನು ವೀಕ್ಷಿಸಬಹುದು. ಇದಕ್ಕಾಗಿ ನಾಲ್ಕು ಪ್ಯಾಕೇಜ್‌ಗಳಲ್ಲಿ ಮಕ್ಕಳು ಹಾಗೂ ವಯಸ್ಕರಿಗೆ ಪ್ರತ್ಯೇಕ ಟಿಕೆಟ್‌ ದರ ನಿಗದಿಪಡಿಸಲಾಗಿದೆ. 

ರೈತ ದಸರಾಕ್ಕೆ ಕೃಷಿ ಸಚಿವರೇ ಗೈರು
ಮೈಸೂರು: ನಗರದ ಜೆ.ಕೆ. ಮೈದಾನದಲ್ಲಿ ಆಯೋಜಿಸಿರುವ 3 ದಿನಗಳ ರೈತ ದಸರೆಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ನಯೀಮಾ ಸುಲ್ತಾನ್‌ ಶುಕ್ರವಾರ ಚಾಲನೆ ನೀಡಿದರು. ಆದರೆ, ರೈತರಿಗಾಗಿ ನಡೆಸುವ ರೈತ ದಸರೆಯ ಉದ್ಘಾಟನೆಗೆ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಗೈರು ಹಾಜರಾಗಿದ್ದು, ನೆರೆದಿದ್ದ ರೈತರಲ್ಲಿ ಅಸಮಾಧಾನ ಮೂಡಿಸಿತು. ಪ್ರತಿ ಬಾರಿಯೂ ನೆಪಮಾತ್ರಕ್ಕೆ ರೈತ
ದಸರೆಯನ್ನು ನಡೆಸಲಾಗುತ್ತದೆ. ಇದರಲ್ಲಿ ರೈತರ ಅನುಕೂಲಕ್ಕಾಗಿ ಯಾವುದೇ ಮಾಹಿತಿ ಇರುವುದಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ರೈತ ದಸರೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವುದಿಲ್ಲ ಎಂದು ರೈತರು ತಮ್ಮ ಅಸಮಾಧಾನ ಹೊರ ಹಾಕಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.