
ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ
Team Udayavani, Jun 10, 2023, 8:30 AM IST

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯ ಪರಿಷ್ಕರಣೆ, ಶಿಕ್ಷಣ ನೀತಿಗಳ ಬಗ್ಗೆ ಸಾಹಿತಿಗಳ ಸಲಹೆ ಪಡೆಯುವ ಬದಲು ತಮ್ಮ ಪಕ್ಷದ ಮಾಜಿ ಶಿಕ್ಷಣ ಸಚಿವರಿಂದ ಸಲಹೆ, ಮಾಹಿತಿ ಪಡೆದುಕೊಳ್ಳಲಿ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.
ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ವೈ. ಎ.ನಾರಾಯಣಸ್ವಾಮಿ, ಶಶಿಲ್ ನಮೋಶಿ, ಚಿದಾನಂದ ಗೌಡ, ಅ. ದೇವೇಗೌಡ, ಮಾಜಿ ಸದಸ್ಯ ಅರುಣ್ ಶಹಾಪುರ ಅವರು ಪಠ್ಯ ಪರಿಷ್ಕರಿಸುವಂತೆ ಕೆಲವು ಸಾಹಿತಿಗಳು ಸರಕಾರದ ಹಿಂದೆ ಬಿದ್ದಿರುವುದನ್ನು ಖಂಡಿಸಿದರು.
ಹಿಂದೆ ಕಾಂಗ್ರೆಸ್ ಪಕ್ಷದಿಂದ ಶಿಕ್ಷಣ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ, ತನ್ವೀರ್ ಸೇಠ್, ಕಿಮ್ಮನೆ ರತ್ನಾಕರ, ಎಚ್. ವಿಶ್ವನಾಥ್ ಮುಂತಾದವರನ್ನು ಭೇಟಿಯಾಗಿ ಮಧು ಬಂಗಾರಪ್ಪ ಸಲಹೆ ಪಡೆದುಕೊಂಡು ಮಕ್ಕಳ ಭವಿಷ್ಯ ಉಜ್ವಲವಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಒಂದು ವರ್ಗದ ಕೆಲವು ಸಾಹಿತಿಗಳ ಮಾತು ಕೇಳಿಕೊಂಡು ಪಠ್ಯ ಪರಿಷ್ಕರಣೆಗೆ ಮುಂದಾದರೆ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದಂತಾಗುತ್ತದೆ ಎಂದು ಶಾಸಕರು ಟೀಕಿಸಿದರು.
ಶಾಸಕರ ಸಭೆ ಕರೆಯಿರಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈ.ಎ.ನಾರಾಯಣ ಸ್ವಾಮಿ, ಜು. 7ಕ್ಕೆ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗಗಳ ಬಗ್ಗೆ ಚರ್ಚಿಸಲು ವಿಧಾನ ಪರಿಷತ್ನ ಪದವೀಧರ ಮತ್ತು ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರ ಬಜೆಟ್ ಪೂರ್ವ ಸಭೆ ನಡೆಸುವಂತೆ ಮನವಿ ಮಾಡಿದರು.
ಕಾಲಮಿತಿಯಲ್ಲಿ ವರ್ಗಾವಣೆ ಮಾಡಿ
ಶೈಕ್ಷಣಿಕ ವರ್ಷ ಆರಂಭಗೊಂಡ ಬಳಿಕ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 90 ಸಾವಿರ ಶಿಕ್ಷಕರ ವರ್ಗಾವಣೆ ಚಟುವಟಿಕೆ ನಡೆಯುತ್ತಿದ್ದು, ಇದನ್ನು ಕಾಲಮಿತಿಯಲ್ಲಿ ಮುಗಿಸಬೇಕು. ಹೆಚ್ಚುವರಿ ಶಿಕ್ಷಕರ ಗೊಂದಲ ಪರಿಹರಿಸಬೇಕು ಎಂದು ನಾರಾಯಣ ಸ್ವಾಮಿ ಆಗ್ರಹಿಸಿದರು.
15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿ
58 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ. ಈ ನಿಟ್ಟಿನಲ್ಲಿ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಬಿಜೆಪಿ ಸರಕಾರ ಪ್ರಾಮಾಣಿಕ ಪ್ರಯತ್ನ ನಡೆಸಿ, ಅಂತಿಮ ಪಟ್ಟಿಯನ್ನೂ ಸಿದ್ಧಪಡಿಸಿತ್ತು. ಆದರೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ ನೇಮಕಾತಿ ಪತ್ರ ಕೊಡಲು ಸಾಧ್ಯವಾಗಿರಲಿಲ್ಲ. ಕಾನೂನು ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಉಳಿದಂತೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಶಶೀಲ್ ನಮೋಶಿ ಆಗ್ರಹಿಸಿದರು.
ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಬೇಕು. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು ಎಂದು ನಮೋಶಿ ಆಗ್ರಹಿಸಿದರು.
ಡೈನಾಮಿಕ್ ಮಧು ಮತ್ತೊಬ್ಬ ಬಂಗಾರಪ್ಪ ಆಗಲಿ
ಶಿಕ್ಷಣ ಇಲಾಖೆ ಅತಿ ಮಹತ್ವದ್ದಾಗಿದ್ದು, ಇದನ್ನು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಸರಕಾರ ವೇಗವಾಗಿ ಕೆಲಸ ಪ್ರಾರಂಭಿಸಿದ್ದು ಅಭಿನಂದನೀಯ. ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಡೈನಾಮಿಕ್ ಆಗಿದ್ದಾರೆ. ಇವರು ಮತ್ತೊಬ್ಬ ಬಂಗಾರಪ್ಪ ಆಗಬೇಕು ಎನ್ನುವುದು ನಮ್ಮ ಆಶಯ ಎಂದು ವೈ.ಎ.ನಾರಾಯಣ ಸ್ವಾಮಿ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ
MUST WATCH
ಹೊಸ ಸೇರ್ಪಡೆ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

ಪ್ರೀತಿ, ಗೀತಿ ಇತ್ಯಾದಿ…: ನೆಚ್ಚಿನವಾಡು ತೆಲುಗು ಸಿನಿಮಾ