ಕರ್ನಾಟಕ ಮಹಿಳಾ ಕ್ರಿಕೆಟ್ ತಂಡಕ್ಕೆ ವಿಜಯಪುರ ವಿದ್ಯಾರ್ಥಿನಿ ಆಯ್ಕೆ
Team Udayavani, Sep 24, 2022, 8:37 PM IST
ವಿಜಯಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಆಟಗಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ವಿಜಯಪುರ ಮೂಲದ ಅನ್ನಪೂರ್ಣ ಭೋಸಲೆ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ಆಗಿ ಆಯ್ಕೆಯಾಗಿದ್ದಾರೆ.
ಬಿಎಲ್ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಬಿ.ಕಾಂ. ಮೊದಲ ವರ್ಷದಲ್ಲಿ ಓದುತ್ತಿರುವ ಅನ್ನಪೂರ್ಣ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ 20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದಿನಲ್ಲಿ ಅಕ್ಟೋಬರ್ 1 ರಿಂದ 8 ವರೆಗೆ ಮಹಿಳೆಯರ ಟಿ 20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
2019 ರಲ್ಲಿ 16 ವರ್ಷದೊಳಗಿನ ಏಕದಿನ ತಂಡಕ್ಕೆ ಆಯ್ಜೆಯಾಗಿದ್ದ ಅನ್ನಪೂರ್ಣ, 2021 ರಲ್ಲಿ 19ವರ್ಷದೊಳಗಿನ ಏಕದಿನ ತಂಡಕ್ಕೂ ಆಯ್ಕೆಯಾಗಿದ್ದಳು. ಇದೀಗ 19 ವರ್ಷದೊಳಗಿನ ಮಹಿಳಾ ಟಿ 20 ತಂಡಕ್ಕೆ ಆಯ್ಕೆಯಾಗಿದ್ದಾರೆ.
ಬಿಎಲ್ಡಿಇ ಸಂಸ್ಥೆಯ ಎಸ್ಬಿಎಸ್ ಮಹಿಳಾ ಕಲಾ ವಾಣಿಜ್ಯ ವಿಜ್ಞಾನ ಕಾಲೇಜಿನಲ್ಲೇ ಅಧ್ಯಯನ ಮಾಡಿದ್ದ ರಾಜೇಶ್ವರಿ ಗಾಯಕವಾಡ ಕರ್ನಾಟಕದ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
ಅನ್ನಪೂರ್ಣಾ ಸಾಧನೆಗೆ ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ. ಪಾಟೀಲ ಅಭಿನಂದಿಸಿದ್ದು, ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವ ಸಾಧನೆ ಮಾಡುವಂತೆ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ