ಹಿರಿಯ ಕಲಾವಿದ ಗುರುಮೂರ್ತಿ ಇನ್ನಿಲ್ಲ
Team Udayavani, Aug 19, 2017, 7:57 AM IST
ಬೆಂಗಳೂರು: ಕನ್ನಡಪರ ಹೋರಾಟಗಾರ ಹಾಗೂ ಕಲಾವಿದ ಟಿ.ವಿ. ಗುರುಮೂರ್ತಿ ತೀವ್ರ ಹೃದಯಾಘಾತದಿಂದ ಶುಕ್ರವಾರ ರಾತ್ರಿ ಕನಕಪುರ ರಸ್ತೆಯ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 67ವರ್ಷ ವಯಸ್ಸಾಗಿತ್ತು.
ಶುಕ್ರವಾರ ಸಂಜೆ ಮನೆಯಲ್ಲಿರುವಾಗ ಹೃದಯಾಘಾತ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅಸ್ಪತ್ರೆಗೆ ಸಾಗಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಮೂಲತ ತೂಮಕೂರಿನ ತಿಪಟೂರಿನವರಾದ ಗುರುಮೂರ್ತಿ ಅವರು, ಚಿತ್ರರಂಗದಲ್ಲಿ ಗುರುಮಾಮನೆಂದೇ ಜನಜನಜನಿತರಾಗಿದ್ದರು. ಮುಕ್ತ ಮುಕ್ತ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ಅಭಿನಹಿಸಿ ಮನೆಮಾತಾಗಿದ್ದರು. ಕನ್ನಡದ ಕಂಠಿ , ಜಗ್ಗುದಾದ ಸೇರಿದಂತೆ 12ಕ್ಕೂ ಅಧಿಕ ಜಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಗುರುಮೂರ್ತಿ ಅವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಅವರನ್ನು ಅಗಲಿದ್ದಾರೆ. ಹಿರಿಯ ಪುತ್ರ ವಿದೇಶದಲ್ಲಿರುವುದರಿಂದ ವಾಪಸ್ ಬಂದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ