ಹಿರಿಯ ಪತ್ರಕರ್ತ, ರಂಗಕರ್ಮಿ ಗುಡಿಹಳ್ಳಿ ನಾಗರಾಜ್‌ ನಿಧನ


Team Udayavani, Aug 26, 2021, 8:37 PM IST

ಹಿರಿಯ ಪತ್ರಕರ್ತ, ರಂಗಕರ್ಮಿ ಗುಡಿಹಳ್ಳಿ ನಾಗರಾಜ್‌ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ರಂಗಕರ್ಮಿ ಗುಡಿಹಳ್ಳಿ ನಾಗರಾಜ್‌ (67) ಅವರು ಗುರುವಾರ ನಿಧನ ಹೊಂದಿದ್ದಾರೆ. ಅವರು, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಅಂತ್ಯಸಂಸ್ಕಾರ ದಾವಣಗೆರೆ ಜಿಲ್ಲೆಯ ಕೆರೆಗುಡಿಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಗುಡಿಹಳ್ಳಿಯವರಾದ ನಾಗರಾಜರವರು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎ.ಇಂಗ್ಲಿಷ್‌ ಪದವಿ ಪಡೆದು ಆ ನಂತರ ಹರಪನಹಳ್ಳಿಯಲ್ಲಿ 3 ವರ್ಷ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

1983ರಲ್ಲಿ ಅವರು ಪತ್ರಿಕೋದ್ಯಮಕ್ಕೆ ಹೆಜ್ಜೆಯಿರಿಸಿದ್ದರು. ರಂಗಭೂಮಿಯ ಬಗ್ಗೆ ಅಪಾರ ಒಲವು ಹೊಂದಿದ್ದ ಗುಂಡಿಹಳ್ಳಿ ನಾಗರಾಜ ಅವರು 15ಕ್ಕೂ ಅಧಿಕ ರಂಗಕೃತಿಗಳನ್ನು ರಚಿಸಿದ್ದಾರೆ. ರಂಗನಾಟಕ ಪ್ರಯೋಗ ಸಾರ್ಥಕತೆ’, “ತೆರೆ ಸರಿದಾಗ’ (ಮಾಲತಿಶ್ರೀ ಮೈಸೂರು ಆತ್ಮಕತೆ), “ರಂಗಸಿರಿ’ (ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ), “ಗುಬ್ಬಿ ವೀರಣ್ಣ’, “ಡಾ.ಲಕ್ಷ್ಮಣದಾಸ್‌’, “ಗಾನಕೋಗಿಲೆ’, “ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು’, “ಮೇಕಪ್‌ಮನ್‌ ಸುಬ್ಬಣ್ಣ’, “ರಂಗನೇವರಿಕೆ’, “ರಂಗಸಂದರ್ಶನ‌’, “ರಂಗದಿಗ್ಗಜರು’, “ಚಿಂದೋಡಿ ಲೀಲಾ’, “ಕಲಾಗ್ರಾಮ’, “ಜನಪರ ರಂಗಭೂಮಿ’, “ರಂಗಸೆಲೆ’ ಸೇರಿದಂತೆ ಹಲವು ಕೃತಿಗಳನ್ನು ರಂಗಭೂಮಿಗೆ ನೀಡಿದ್ದಾರೆ.

ಇದನ್ನೂ ಓದಿ:ಬಿಜೆಪಿ 30 ಸೀಟು ಮೇಲೆ ಗೆಲ್ಲುವುದಿಲ್ಲ: ರಾಮಲಿಂಗಾರೆಡ್ಡಿ

ಗುಡಿಹಳ್ಳಿ ನಾಗರಾಜ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ, ಪ್ರಸ್‌ಕ್ಲಬ್‌ ಬೆಂಗಳೂರುನ ಉಪಾಧ್ಯಕ್ಷರಾಗಿ ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.ರಾಜ್ಯೋತ್ಸವ ಪ್ರಶಸ್ತಿ, ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗುಡಿಹಳ್ಳಿ ನಾಗರಾಜ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್‌, ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಗುಡಿಹಳ್ಳಿ ನಾಗರಾಜ ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಉತ್ತಮ ಬರಹಗಾರರನ್ನು ಕಳೆದು ಕೊಂಡಿದೆ ಎಂದು ಸಚಿವ ಸುನೀಲ್‌ಕುಮಾರ್‌ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.